ಮಡಿಕೇರಿ, ಫೆ. ೪: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ೦೧-೦೧-೨೦೨೨ಕ್ಕೆ ಅನ್ವಯವಾಗುವಂತೆ ಇತ್ತೀಚೆಗೆ ನಡೆದ ವಿಶೇಷ ಅಭಿಯಾನ ಸಂದರ್ಭದಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸುವುದು, ಸರಿಪಡಿ ಸುವುದು ಹಾಗೂ ತೆಗೆದುಹಾಕುವುದು ಮತ್ತಿತರ ಕಾರ್ಯಗಳು ನಡೆದಿದೆ. ಆ ದಿಸೆಯಲ್ಲಿ ಈಗಾಗಲೇ ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗಿದ್ದು, ಈ ಬಗ್ಗೆ ಮತ್ತೊಮ್ಮೆ ಪರಿಶೀಲಿಸಿ ಖಾತರಿ ಪಡಿಸಿಕೊಳ್ಳುವಂತೆ ತಹಶೀಲ್ದಾರರು ಹಾಗೂ ಕಂದಾಯ ನಿರೀಕ್ಷಕರಿಗೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಮತದಾರರ ಪಟ್ಟಿ ವೀಕ್ಷಕರಾದ ವಿ.ಅನ್ಬುಕುಮಾರ್ ನಿರ್ದೇಶನ ನೀಡಿದ್ದಾರೆ.

ನಗರದ ತಾಲೂಕು ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ‘ಮತದಾರರ ಪಟ್ಟಿ ಪರಿಷ್ಕರಣೆ’ ಸಂಬAಧ ಇದುವರೆಗೆ ಆಗಿರುವ ಕಾರ್ಯಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು. ಮತದಾರರ ಪಟ್ಟಿ ಪರಿಷ್ಕರಣೆಯು ನಿರಂತರ ಪ್ರಕ್ರಿಯೆ ಆಗಿದ್ದರೂ ಸಹ, ಇತ್ತೀಚೆಗೆ ನಡೆದ ವಿಶೇಷ ಅಭಿಯಾನ ಸಂದರ್ಭದಲ್ಲಿ ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ, ಸರಿಪಡಿಸುವುದು ಹಾಗೂ ತೆಗೆಯುವ ಕಾರ್ಯಗಳು ನಡೆದಿವೆ. ಆ ದಿಸೆಯಲ್ಲಿ ಯಾವ ಯಾವ ಪ್ರದೇಶದಲ್ಲಿ ಹೆಚ್ಚು ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದ್ದಾರೆ. ಆ ಗ್ರಾಮಗಳಲ್ಲಿ ಹೆಚ್ಚಿನ ಗಮನಹರಿಸಬೇಕು ಎಂದು ಮತದಾರರ ಪಟ್ಟಿ ವೀಕ್ಷಕರು ಸಲಹೆ ನೀಡಿದರು.

ಜೊತೆಗೆ ಹೊಸದಾಗಿ ಮತ ದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಯಾವ ಗ್ರಾಮಗಳಲ್ಲಿ ಅರ್ಜಿ ಸಲ್ಲಿಸಿಲ್ಲ, ಅಂತಹ ಗ್ರಾಮಗಳಲ್ಲಿಯೂ ಗಮನಹರಿಸಬೇಕು. ೧೮ ವರ್ಷ ಮೇಲ್ಪಟ್ಟವರು ಮತದಾರರ ಪಟ್ಟಿಯಿಂದ ವಂಚಿತರಾಗದAತೆ ನೋಡಿಕೊಳ್ಳಬೇಕು. ಮತದಾರರ ಪಟ್ಟಿ ವಿಶೇಷ ಅಭಿಯಾನ ಸಂದರ್ಭ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಯಾದವರಿಗೆ ಚುನಾವಣಾ ಮತದಾರರ ಗುರುತಿನ ಚೀಟಿಯನ್ನು ನೀಡಬೇಕು. ಗುರುತಿನ ಚೀಟಿ ತಲುಪಿಸಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು.

ಮತದಾರರ ಪಟ್ಟಿ ಪರಿಷ್ಕರಣೆ ಸಂಬAಧಿಸಿದAತೆ ಮತದಾರರ ಪಟ್ಟಿ ಸರಿಪಡಿಸುವುದು, ತೆಗೆದುಹಾಕುವುದು ಮತ್ತಿತರ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡಬಾರದು. ಸಂವಿಧಾನಾತ್ಮಕವಾಗಿ ಕೆಲಸ ನಿರ್ವಹಿಸಬೇಕು.

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಗಂಭೀರವಾಗಿ ಪರಿಗಣಿಸುವಂತೆ ಕಂದಾಯ ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳಿಗೆ ಅನ್ಬುಕುಮಾರ್ ಸೂಚಿಸಿದರು.

ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬAಧಿಸಿದAತೆ ಈಗಾಗಲೇ ಪ್ರಕಟಿಸಲಾಗಿರುವ ಅಂತಿಮ ಮತದಾರರ ಪಟ್ಟಿಯನ್ನು ತಾಲೂಕುವಾರು ಮತ್ತು ಕ್ಷೇತ್ರವಾರು ಮತ್ತೊಮ್ಮೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು. ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆ ಯಾದವರಿಗೆ ಗುರುತಿನ ಚೀಟಿಯನ್ನು ತಲುಪಿಸಿ ಸ್ವೀಕೃತಿ ಪಡೆಯಲಾಗುವುದು. ಚುನಾವಣಾ ಆಯೋಗದ ನಿರ್ದೇಶನ ಪಾಲಿಸಲಾಗುವುದು ಎಂದರು.

ತಹಶೀಲ್ದಾರರಾದ ಪಿ.ಎಸ್. ಮಹೇಶ್ ಹಾಗೂ ಯೋಗಾನಂದ ಅವರು ಮಾತನಾಡಿ ಅಂತಿಮ ಮತದಾರರ ಪಟ್ಟಿಯನ್ನು ೨೦೨೨ ರ ತಾ. ೧೩ ರಂದು ಜಿಲ್ಲೆಯ ನಾಡಕಚೇರಿ, ತಾಲೂಕು ಕಚೇರಿ, ನಗರಸಭೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಪ್ರಕಟಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿ.ಪಂ. ಸಿಇಓ ಭಂವರ್ ಸಿಂಗ್ ಮೀನಾ ಪೌರಾಯುಕ್ತ ರಾಮದಾಸ್, ಕಂದಾಯ ಇಲಾಖೆಯ ಕಂದಾಯ ನಿರೀಕ್ಷಕರು ಇತರರು ಇದ್ದರು.