ಮಡಿಕೇರಿ, ಫೆ. ೧೦: ಗ್ರಾಮ ಒನ್ ಯೋಜನೆಯನ್ನು ಸರ್ಕಾರ ಈಗಾಗಲೇ ಲೋಕಾರ್ಪಣೆ ಮಾಡಿದ್ದು, ‘ಗ್ರಾಮ ಒನ್’ ಮೂಲಕ ಹಳ್ಳಿಗರಿಗೂ ಸೇವೆ ನೀಡಬೇಕೆಂಬ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ.
ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಸೇವಾಸಿಂಧು ಯೋಜನೆಯಡಿಯಲ್ಲಿ ಸುಮಾರು ೭೫೦ಕ್ಕೂ ಹೆಚ್ಚು ನಾಗರಿಕ ಸೇವೆ ಪಡೆಯಲು ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಸ್ವೀಕರಿಸಲಾಗುತ್ತದೆ. ವಾರದ ಎಲ್ಲಾ ದಿನಗಳಲ್ಲಿ (ಮಂಗಳವಾರ ಹೊರತುಪಡಿಸಿ) ಬೆಳಿಗ್ಗೆ ೮ ರಿಂದ ಸಂಜೆ ೮ ಗಂಟೆಯವರೆಗೆ ಕೇಂದ್ರಗಳು ಕಾರ್ಯನಿರ್ವಹಿಸಲಿವೆ.
ಕೊಡಗು ಜಿಲ್ಲೆಯಲ್ಲಿ ಈಗಾಗಲೇ ೬೮ ಗ್ರಾಮ ಪಂಚಾಯಿತಿಗಳಲ್ಲಿ ‘ಗ್ರಾಮ ಒನ್’ ಯೋಜನೆಯನ್ನು ಯಶಸ್ವಿಯಾಗಿ ಪ್ರಾರಂಭಿಸಲಾಗಿದೆ. ಉಳಿದಂತೆ ೩೬ ಗ್ರಾಮ ಪಂಚಾಯಿತಿಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ ಗ್ರಾಮ ಒನ್ ಆರಂಭಿಸಲು ಆಸಕ್ತ ಪ್ರಾಂಚೈಸಿಗಳಿAದ ಅರ್ಜಿ ಆಹ್ವಾನಿಸಲಾಗಿದೆ.
ಮಡಿಕೇರಿ ತಾಲೂಕಿನ ಮಡಿಕೇರಿ ಹೋಬಳಿಯ ಹೊಸ್ಕೇರಿ, ನಾಪೋಕ್ಲು ಹೋಬಳಿಯ ಎಮ್ಮೆಮಾಡು, ಭಾಗಮಂಡಲ ಹೋಬಳಿಯ ಕರಿಕೆ, ಸಂಪಾಜೆ ಹೋಬಳಿಯ ಪೆರಾಜೆ.
ಸೋಮವಾರಪೇಟೆ ತಾಲೂಕಿನ ಶಾಂತಳ್ಳಿ ಹೋಬಳಿಯ ಶಾಂತಳ್ಳಿ, ಬೆಟ್ಟದಳ್ಳಿ, ತೋಳೂರು ಶೆಟ್ಟಳ್ಳಿ, ಸೋಮವಾರಪೇಟೆ ಹೋಬಳಿಯ ಗಣಗೂರು, ನೇರುಗಳಲೆ, ಮಾದಾಪುರ, ಚೌಡ್ಲು, ಶನಿವಾರಸಂತೆಯ ನಿಡ್ತ.
ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಹೋಬಳಿಯ ಗರ್ವಾಲೆ, ಕಂಬಿಬಾಣೆ, ಕೆದಕಲ್, ಹರದೂರು, ನಾಕೂರು ಶಿರಂಗಾಲ, ೭ನೇ ಹೊಸಕೋಟೆ, ಕುಶಾಲನಗರ ಹೋಬಳಿಯ ಗುಡ್ಡೆಹೊಸೂರು, ವಾಲ್ನೂರು ತ್ಯಾಗತ್ತೂರು.
ವೀರಾಜಪೇಟೆ ತಾಲೂಕಿನ ವೀರಾಜಪೇಟೆ ಹೋಬಳಿಯ ಕದನೂರು, ಕೆದಮುಳ್ಳೂರು, ಅಮ್ಮತ್ತಿ ಹೋಬಳಿಯ ಹೊಸೂರು, ಅಮ್ಮತ್ತಿ, ಮಾಲ್ದಾರೆ, ಬಿಳುಗುಂದ.
ಪೊನ್ನAಪೇಟೆ ತಾಲೂಕಿನ ಪೊನ್ನಂಪೇಟೆ ಹೋಬಳಿಯ ಹಾತೂರು, ಬಿ. ಶೆಟ್ಟಿಗೇರಿ, ಕಿರಗಂದೂರು, ಮಾಯಮುಡಿ, ಬಾಳೆಲೆ ಹೋಬಳಿಯ ನಿಟ್ಟೂರು, ಪೊನ್ನಪ್ಪಸಂತೆ, ಹುದಿಕೇರಿಯ ಬಲ್ಯಮಂಡೂರು, ಬಿರುನಾಣಿ, ಶ್ರೀಮಂಗಲ ಹೋಬಳಿಯ ಕೆ. ಬಾಡಗ ಮತ್ತು ನಾಲ್ಕೇರಿಯಲ್ಲಿ ಪ್ರಾಂಚೈಸಿ ತೆರೆಯಲು ಅವಕಾಶವಿದೆ.
ಆಸಕ್ತ ಪ್ರಾಂಚೈಸೀಸ್ಗಳು hಣಣಠಿs://ತಿತಿತಿ.ಞಚಿಡಿಟಿಚಿಣಚಿಞಚಿoಟಿe.gov.iಟಿ/Pubಟiಛಿ/ಉಡಿಚಿmಔಟಿeಈಡಿಚಿಟಿಛಿhiseeಖಿeಡಿms ಈ ಲಿಂಕ್ನ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಪ್ರಾಜೆಕ್ಟ್ ಮ್ಯಾನೇಜರ್, ಜಿಲ್ಲಾಧಿಕಾರಿ ಕಚೇರಿ, ಮೊ.ಸಂ. ೮೮೬೧೬೮೨೧೨೦ ಇವರಿಂದ ಪಡೆಯಬಹುದಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ತಿಳಿಸಿದ್ದಾರೆ.