ಮಡಿಕೇರಿ, ಮಾ. ೨೧: ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ ೧೦ ತಿಂಗಳ ತೋಟಗಾರಿಕೆ ತರಬೇತಿಯು ೨೦೨೨ ರ ಮೇ ೨ ರಿಂದ ೨೦೨೩ ರ ಫೆಬ್ರವರಿ ೨೮ ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್ನ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದೆ. ಈ ಸಂಬAಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಏಪ್ರಿಲ್ ೧೬ ರ ಸಂಜೆ ೫ ಗಂಟೆ ಕೊನೆಯ ದಿನ ವಾಗಿದೆ. ಅರ್ಜಿಯನ್ನು ಕಚೇರಿಯಿಂದ ಪಡೆಯಬಹುದಾಗಿದೆ. ಹೆಚ್ಚಿನ ವಿವರ ಗಳನ್ನು ಈ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಅಥವಾ ದೂ: ೮೩೧೦೬೮೭೭೦೭ ಅಥವಾ ಅಂತರ್ಜಾಲ ತಿತಿತಿ.hoಡಿಣiಛಿuಟಣuಡಿe.ಞಚಿಡಿ.ಟಿiಛಿ.iಟಿ ಇಲ್ಲಿ ಪಡೆಯಬಹುದು. ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್ಎಸ್ಎಲ್ಸಿ ಅಂಕಪಟ್ಟಿ, ಛಾಪಾಕಾಗದ, ತಂದೆ/ತಾಯಿ/ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್ಟಿಸಿ, ಜಾತಿ ಪ್ರಮಾಣ ಪತ್ರ, ಫೋಟೋ ಇತ್ಯಾದಿ) ಅರ್ಹ ಅಭ್ಯರ್ಥಿಗಳು ನಿಗದಿತ ಸಮಯದೊಳಗೆ ಅರ್ಜಿ ಸಲ್ಲಿಸುವಂತೆ ರಾಜ್ಯ ವಲಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಪ್ರಮೋದ್ ತಿಳಿಸಿದ್ದಾರೆ.