ಮಡಿಕೇರಿ, ಮಾ. ೨೮: ನಗರಸಭೆ ವ್ಯಾಪ್ತಿಗೆ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲು ೨ನೇ ಮೊಣ್ಣಂಗೇರಿ ಗ್ರಾಮದಲ್ಲಿ ಗುರುತಿಸಲಾಗಿರುವ (ಸರ್ವೆ ನಂ೨೦/೧) ಜಾಗದ ದಾಖಲೆಗಳನ್ನು ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ ಮತ್ತು ಪೌರಾಯುಕ್ತ ಎಸ್.ವಿ.ರಾಮದಾಸ್ ಅವರಿಗೆ ಹಸ್ತಾಂತರಿಸಲಾಯಿತು.

ಜಿಲ್ಲಾಧಿಕಾರಿ ಅವರ ಆದೇಶದಂತೆ ಭೂದಾಖಲೆಗಳ ಇಲಾಖೆಯ ಕುಚೇಲ ಅವರು ನಗರಸಭೆ ಕಚೇರಿಯಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪರಿಸರ ಇಂಜಿನಿಯರ್ ಸೌಮ್ಯ ಇತರರು ಇದ್ದರು.