ಮಡಿಕೇರಿ, ಮಾ. ೨೮: ಜಿಲ್ಲಾಡಳಿತ ವತಿಯಿಂದ ಪದ್ಮಭೂಷಣ ಜನರಲ್ ಕೆ.ಎಸ್. ತಿಮ್ಮಯ್ಯ ಅವರ ೧೧೬ನೇ ಜನ್ಮ ದಿನಾಚರಣೆಯು ತಾ. ೩೧ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಜನರಲ್ ತಿಮ್ಮಯ್ಯ ಸ್ಮಾರಕ ಭವನ (ಸನ್ನಿಸೈಡ್)ದಲ್ಲಿ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರುಗಳ ಉಪಸ್ಥಿತಿಯಲ್ಲಿ ಆಚರಿಸಲಾಗುವುದು. ಜನರಲ್ ತಿಮ್ಮಯ್ಯ ಸ್ಮಾರಕ ಭವನ ಆವರಣದಲ್ಲಿರುವ ಅಪರೂಪದ ವಸ್ತುಗಳ (ಅUಖIಔ SಊಔP/ ಕೆಫೆಟೇರಿಯಾ) ಮಾರಾಟ ಮಳಿಗೆಯ ಉದ್ಘಾಟನಾ ಸಮಾರಂಭ ನಡೆಯಲಿದೆ.

ಆ ಪ್ರಯುಕ್ತ ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ತಾ. ೩೧ ರಂದು ಸ್ಮಾರಕಕ್ಕೆ ಉಚಿತ ಪ್ರವೇಶದ ಅವಕಾಶ ಕಲ್ಪಿಸಲಾಗಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ತಿಳಿಸಿದ್ದಾರೆ.