ಮಡಿಕೇರಿ, ಏ. ೧: ಬೀದಿಬದಿ ವ್ಯಾಪಾರಿಗಳು ಮೊದಲಿಗೆ ಶುಚಿತ್ವಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು. ಪ್ಲಾಸ್ಟಿಕ್ಗಳನ್ನು ಬಳಸಬಾರದು. ತಮ್ಮ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳುವುದು ಜೊತೆಗೆ ಕಾನೂನು ಪಾಲನೆ ಮಾಡಿಕೊಂಡು ನಗರದ ಶುಚಿತ್ವಕ್ಕೆ ಸಹಕರಿಸಬೇಕು ಎಂದು ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಅವರು ಹೇಳಿದರು.
ದೀನ ದಯಾಳ್ ಅಂತ್ಯೋದಯ ಯೋಜನೆ, ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನದ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ ಮತ್ತು ಪಟ್ಟಣ ಮಾರಾಟ ಸಮಿತಿಗಳ ಸದಸ್ಯರುಗಳಿಗೆ ಎರಡು ದಿನ ವಿವಿಧ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರಕ್ಕೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಗರಸಭೆ ಅಧ್ಯಕ್ಷೆ ಎನ್.ಪಿ. ಅನಿತಾ ಪೂವಯ್ಯ ಅವರು ಚಾಲನೆ ನೀಡಿ ಮಾತನಾಡಿದರು.ಒಬ್ಬ ವ್ಯಕ್ತಿ ಹಸಿವಿನಿಂದ ಮಲಗಬಾರದು ಎಂಬ ಉದ್ದೇಶದಿಂದ ಯಾವುದಾದರೊಂದು ವ್ಯಾಪಾರ ಮಾಡಿಕೊಂಡು ತಮ್ಮ ಜೀವನ ನಡೆಸುವಂತಾಗಬೇಕು ಎಂಬ ದೃಷ್ಟಿಯಿಂದ ಸರ್ಕಾರವು ಹಲವಾರು ಸವಲತ್ತುಗಳನ್ನು ನೀಡಿ ಬೀದಿಬದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶಗಳನ್ನು ಕಲ್ಪಿಸಿಕೊಟ್ಟಿದೆ. ಎರಡು ವರ್ಷಗಳಿಂದ ಕೋವಿಡ್ ನಿಂದಾಗಿ ಬೀದಿಬದಿ ವ್ಯಾಪಾರಿಗಳಿಗೆ ವ್ಯಾಪಾರವಿಲ್ಲದೆ ಜೀವನ ನಡೆಸಲು ಸಾಧ್ಯವಾಗದಂತಹ ಪರಿಸ್ಥಿತಿ ಎದುರಾಗಿತ್ತು. ಅಂತವರಿಗೆ ಸರ್ಕಾರ ವತಿಯಿಂದ ಸಹಾಯ ಧನವನ್ನು ನೀಡಲಾಗಿದೆ ಎಂದರು.
ಬೀದಿ ಬದಿ ವ್ಯಾಪಾರಿಗಳಿಗೆ ನಗರಸಭೆ ವತಿಯಿಂದ ವ್ಯಾಪಾರಕ್ಕಾಗಿ ಕಾರ್ಡ್ ಮತ್ತು ಜಾಗವನ್ನು ನಿಗದಿಪಡಿಸಲಾಗುವುದು. ಕಾರ್ಡ್ ಪಡೆದವರಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಲಾಗುವುದು. ವ್ಯಾಪಾರಿಗಳಿಗೆ ನಿಗದಿಪಡಿಸಿದ ಜಾಗದಲ್ಲಿ ಮಾತ್ರ ಅವರು ವ್ಯಾಪಾರ ಮಾಡಬೇಕು ಎಂದು ಅವರು ಹೇಳಿದರು. ಪಾದಚಾರಿಗಳಿಗೆ ರಸ್ತೆಯಲ್ಲಿ ನಡೆದಾಡಲು ಕಷ್ಟವಾಗುತ್ತಿರುವುದರಿಂದ ಬೀದಿ ಬದಿ ವ್ಯಾಪಾರಿಗಳು ಫುಟ್ಪಾತಿನಲ್ಲಿ ವ್ಯಾಪಾರ ಮಾಡದೆ ಜನರಿಗೆ ಫುಟ್ಪಾತಿನಲ್ಲಿ ನಡೆದಾಡಲು ಅವಕಾಶ ಮಾಡಿಕೊಡಬೇಕು ಎಂದರು.
ನಗರಸಭೆ ಪೌರಾಯುಕ್ತ ರಾಮ್ದಾಸ್ ಮಾತನಾಡಿ, ಮಡಿಕೇರಿಯಲ್ಲಿ ನೂರಕ್ಕೂ ಹೆಚ್ಚು ಮಂದಿ ಬೀದಿಬದಿಯಲ್ಲಿ ವ್ಯಾಪಾರ ವನ್ನು ಮಾಡಿಕೊಂಡು ತಮ್ಮ ಜೀವನೋಪಾಯವನ್ನು ಕಂಡುಕೊAಡಿ ದ್ದಾರೆ. ಪ್ರಧಾನಮಂತ್ರಿ ಪಿಎಂ ಸ್ವನಿಧಿ ಯೋಜನೆಯಡಿಯಲ್ಲಿ ಕೋವಿಡ್ ಸಂದರ್ಭದಲ್ಲಿ ತಮ್ಮ ಜೀವನವನ್ನು ನಡೆಸಲು ಸರ್ಕಾರದ ವತಿಯಿಂದ ಹತ್ತು ಸಾವಿರ ಸಹಾಯ ಧನವನ್ನು ಸಾಲದ ರೂಪದಲ್ಲಿ ನೀಡಲಾಗಿತ್ತು. ಅದರ ಸದುಪಯೋಗವನ್ನು ಎಲ್ಲರು
ಪಡೆದುಕೊಂಡಿದ್ದಾರೆ. ಇನ್ನೂ ಯಾರಾದರೂ ಸೌಲಭ್ಯವನ್ನು ಪಡೆಯದೆ ಇದ್ದರೆ ಅಂತವರು ಸಾಲ ಪಡೆಯಬಹುದಾಗಿದೆ ಎಂದು ಅವರು ಮಾಹಿತಿ ನೀಡಿದರು. ಮೊದಲ ಕಂತಿನಲ್ಲಿ ಹತ್ತು ಸಾವಿರ ಸಾಲ ಪಡೆದು ತಿಂಗಳ ಕಂತಿನಲ್ಲಿ ಸಾಲ ಮುಗಿಸಿದವರಿಗೆ, ಎರಡನೇ ಕಂತಿನ ರೂಪದಲ್ಲಿ ಇಪ್ಪತ್ತು ಸಾವಿರವನ್ನು ಸಾಲದ ರೂಪದಲ್ಲಿ ನೀಡಲಾಗುವುದು. ಇದರ ಸದುಪಯೋಗವನ್ನು ಎಲ್ಲಾ ಬೀದಿ ಬದಿ ವ್ಯಾಪಾರಿಗಳು ಪಡೆದು ಕೊಳ್ಳಬೇಕು ಎಂದು ಹೇಳಿದರು. ಜಿಲ್ಲಾ ಕಾನೂನು ಪ್ರಾಧಿಕಾರ ವಕೀಲರಾದ ಪದ್ಮ, ಸಂಚಾರಿ ಪೊಲೀಸ್ ಉಪನಿರೀಕ್ಷಕ ಪದ್ಮನಾಭ, ತಾಲೂಕು ಆಹಾರ ಸುರಕ್ಷತಾಧಿಕಾರಿ ಕೆ.ಆರ್. ನವೀನ್ ಕುಮಾರ್ ಅವರು ಬೀದಿಬದಿ ವ್ಯಾಪಾರಿಗಳಿಗೆ ಹಲವು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ನಗರಸಭಾ ಉಪಾಧ್ಯಕ್ಷೆ ಸವಿತಾ ರಾಕೇಶ್, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕಿ ರೇಖಾ ಗಣಪತಿ, ನಗರಸಭಾ ಸದಸ್ಯರು ಇತರರು ಇದ್ದರು. ಸುಶಿಲ ಪ್ರಾರ್ಥಿಸಿದರು, ಜಯಲಕ್ಷಿö್ಮ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.