ಮಡಿಕೇರಿ, ಏ. ೫: ನಗರದ ಶ್ರೀ ಮುತ್ತಪ್ಪ ದೇವಾಲಯದಲ್ಲಿ ತಾ. ೬ ರಿಂದ (ಇಂದಿನಿAದ) ತಾ. ೯ ರವರೆಗೆ ಮುತ್ತಪ್ಪ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಟಿ.ಕೆ. ಸುಧೀರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ತಾ. ೬ ರ ಸಂಜೆ ೬.೩೦ಕ್ಕೆ ಧಾರ್ಮಿಕ ಕಾರ್ಯಗಳು ಆರಂಭವಾಗಲಿದ್ದು, ತಾ. ೭ರ ಸಂಜೆ ೪ ಗಂಟೆಗೆ ವಿಧಾನ ಪರಿಷತ್ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಹಿರಿಯ ವೈದ್ಯರಾದ ಡಾ. ಪಾಟ್ಕರ್ ಇವರುಗಳ ಸಮ್ಮುಖದಲ್ಲಿ ಪರಿಶಿನಿಕಡವು ಮುತ್ತಪ್ಪ ಕ್ಷೇತ್ರದ ಆಚಾರಪಟ್ಟ ಮಡೆಯಚ್ಚನ್ ಶ್ರೀ ಬ್ಲಾತೂರ್ ಚಂದ್ರನ್ ಮಡೆಯಚ್ಚನ್ ಧ್ವಜಾರೋಹಣದ ಮೂಲಕ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದು ಅವರು ತಿಳಿಸಿದರು.

ಮೆರವಣಿಗೆ ಸಮಿತಿ ಸಂಚಾಲಕ ಅಂಬೆಕಲ್ ನವೀನ್ ಕುಶಾಲಪ್ಪ ಮಾತನಾಡಿ, ತಾ. ೮ ರಂದು ಸಂಜೆ ೫ ಗಂಟೆಗೆ ಮುತ್ತಪ್ಪ ದೇವರ ಕಲಶ ಮೆರವಣಿಗೆಯು ಗಾಂಧಿ ಮೈದಾನದಿಂದ ಹೊರಡಲಿದೆ. ಮೆರವಣಿಗೆಯಲ್ಲಿ ಕಡಗದಾಳು, ನೀರುಕೊಲ್ಲಿ, ಸಂಪಿಗೆಕಟ್ಟೆ, ಕೆಎಸ್‌ಆರ್‌ಟಿಸಿ ಡಿಪೋ ಮುಂಭಾಗ, ಕಾಲೇಜು ರಸ್ತೆಯ ಮೈತ್ರಿ ಜಂಕ್ಷನ್ ಹೀಗೆ ನಗರದ ನಾಲ್ಕು ದಿಕ್ಕುಗಳಿಂದ ಮಹಿಳೆಯರು ಮುತ್ತಪ್ಪ ದೇವರ ಕಲಶದೊಂದಿಗೆ ಬರಲಿದ್ದು, ಕಲಶ ಮೆರವಣಿಗೆ ಹಾಗೂ ಮಕ್ಕಳ ತಾಲಾಪೊಲಿ ಮೆರವಣಿಗೆಯನ್ನು ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಉದ್ಘಾಟಿಸಲಿದ್ದಾರೆ. ಮಂಗಳೂರಿನ ಚಂಡೆವಾದ್ಯ, ಪಾಲಕ್ಕಾಡಿನ ಆಕರ್ಷಕ ಕಲಾ ತಂಡಗಳು ಮೆರವಣಿಗೆಗೆ ಮೆರುಗು ನೀಡಲಿವೆ ಎಂದು ಮಾಹಿತಿಯಿತ್ತರು.

ಮುತ್ತಪ್ಪ ಮಹಿಳಾ ವೇದಿಕೆ ಅಧ್ಯಕ್ಷೆ ಶಾರದಾ ರಾಮನ್ ಮಾತನಾಡಿ, ತಾ. ೮ ರಂದು ರಾತ್ರಿ ೯ ಗಂಟೆಯಿAದ ೧.೩೦ರವರೆಗೆ ಮಂಗಳೂರಿನ ಸೌರಭ ಕಲಾ ಪರಿಷತ್ ಮತ್ತು ಕೊಡಗಿನ ಪ್ರತಿಷ್ಟಿತ ಕಲಾ ತಂಡಗಳಿAದ ಸಾಂಸ್ಕೃತಿಕ ಕಾರ್ಯಕ್ರಮಗಳಿದ್ದು, ಪ್ರತಿಭಾವಂತ ಕಲಾವಿದೆ, ರೆಮೊನಾ ಇವೆಟ್ಟೆ ಪಿರೇರಾಳಿಂದ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮವನ್ನು ಶಾಸಕರುಗಳಾದ ಅಪ್ಪಚ್ಚುರಂಜನ್, ಕೆ.ಜಿ. ಬೋಪಯ್ಯ, ಸುಜಾ ಕುಶಾಲಪ್ಪ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು. ಗೋಷ್ಠಿಯಲ್ಲಿ ಮುತ್ತಪ್ಪ ದೇವಾಲಯ ಪ್ರಧಾನ ಕಾರ್ಯದರ್ಶಿ ಕೆ.ವಿ. ಸುಬ್ರಮಣಿ, ತೆಯ್ಯಂಸಮಿತಿ ಸಂಚಾಲಕ ಕೆ.ಎಸ್. ರಮೇಶ್, ಸ್ವಾಗತ ಸಮಿತಿ ಸಹಸಂಚಾಲಕಿ ರಾಣಿ ನೀಲಮ್ಮ ಉಪಸ್ಥಿತರಿದ್ದರು.