ಮಡಿಕೇರಿ, ಏ. ೧೫ : ವಿಶ್ವ ಹಿಂದೂ ಪರಿಷದ್, ಭಜರಂಗದಳ, ದುರ್ಗಾವಾಹಿನಿ ಹಾಗೂ ಕೊಡಗು ಜಿಲ್ಲಾ ಮಾತೃಮಂಡಳಿ ವತಿಯಿಂದ ಹನುಮ ಜಯಂತಿ ಪ್ರಯುಕ್ತ ತಾ. ೧೬ ರಂದು (ಇಂದು) ಬೆಳಿಗ್ಗೆ ೯.೩೦ ರಿಂದ ೧೨.೩೦ರ ವರೆಗೆ ನಗರದ ಆಂಜನೇಯ ದೇವಾಲಯದಲ್ಲಿ ರಾಮತಾರಕ, ಹವನ, ಪವಮಾನ ಕಲಶಾಭಿಷೇಕ ಹಾಗೂ ಭಜನಾ ಕಾರ್ಯಕ್ರಮ ನಡೆಯಲಿದೆ.