ಮಡಿಕೇರಿ, ಮೇ ೧೦: ನ್ಯಾಯಾಲಯ ಮತ್ತು ಪ್ರಜಾಸತ್ತಾತ್ಮಕ ಸಂಸ್ಥೆಗಳಲ್ಲಿ ಕೊಡವ ಭಾಷೆಯನ್ನು ಅನುಷ್ಠಾನಕ್ಕೆ ತರಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಗರದಲ್ಲಿ ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸುವ ಮೂಲಕ ಸರಕಾರದ ಗಮನ ಸೆಳೆಯಿತು.

ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದ ಪ್ರಮುಖರು ಸಂವಿಧಾನದ ೩೪೭, ೩೫೦, ೩೫೦ಎ ಮತ್ತು ೩೫೦ಬಿ ವಿಧಿಗಳಡಿಯಲ್ಲಿ ಕೊಡವರ ಮಾತೃಭಾಷೆಯಾಗಿರುವ ಕೊಡವ ಭಾಷೆಯನ್ನು ಆಡಳಿತದಲ್ಲಿ ಅಳವಡಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಏ. ೩೦ ರಂದು ದೆಹಲಿಯಲ್ಲಿ ನಡೆದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಎಲ್ಲಾ ರಾಜ್ಯಗಳ ಹೈಕೋರ್ಟ್ಗಳ ಮುಖ್ಯ ನ್ಯಾಯಾಧೀಶರುಗಳ ಸಭೆಯಲ್ಲಿ ದೇಶದ ನ್ಯಾಯಾಲಯಗಳು ಮತ್ತು ಇತರ ಪ್ರಜಾಪ್ರಭುತ್ವ ಸಂಸ್ಥೆಗಳಲ್ಲಿ ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಜೆ ಎನ್.ವಿ. ರಮಣ ಅವರು ಕರೆ ನೀಡಿದ್ದರು.

ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ ಈ ಮೂರು ಅಂಗಗಳು ನಮ್ಮ ಸಾಂವಿಧಾನಿಕ ಪ್ರಜಾಪ್ರಭುತ್ವದ ಆಧಾರ ಸ್ತಂಭಗಳಾಗಿವೆ. ಇದರಲ್ಲಿ ಎರಡು ಸ್ತಂಭಗಳ ಮುಖ್ಯಸ್ಥರಾದ ಪ್ರಧಾನಮಂತ್ರಿ ಹಾಗೂ ಸಿಜೆಐ ನ್ಯಾಯಾಂಗ ಮತ್ತು ದೇಶದ ಇತರ ಪ್ರಜಾಪ್ರಭುತ್ವ ಸಂಸ್ಥೆಗಳಲ್ಲಿ ಸ್ಥಳೀಯ ಭಾಷೆಗಳ ಅನುಷ್ಠಾನಕ್ಕಾಗಿ ಬಲವಾಗಿ ಪ್ರತಿಪಾದಿಸಿರುವುದು ಶ್ಲಾಘನೀಯ. ಆಡಳಿತ ಮತ್ತು ಪಠ್ಯಕ್ರಮದಲ್ಲಿ ಕೊಡವ ಭಾಷೆಯನ್ನು ಸೇರಿಸುವುದು ಕಡ್ಡಾಯವಾಗಿದೆ. ಆದರೆ ಕರ್ನಾಟಕ ರಾಜ್ಯದ ಆಡಳಿತ ವ್ಯವಸ್ಥೆ ೧೯೫೬ರ ರಾಜ್ಯ ಮರುಸಂಘಟನೆ ಕಾಯಿದೆಯನ್ನು ಉಲ್ಲಂಘಿಸುತ್ತಾ ಬಂದಿದೆ. ನಿರಂತರವಾಗಿ ಕೊಡವ ಜನಾಂಗದ ಮೇಲೆ ತಮ್ಮ ಜನಾಂಗೀಯ ಪ್ರಾಬಲ್ಯವನ್ನು ಹೇರುತ್ತಾ ಬರಲಾಗಿದೆ ಎಂದು ಆರೋಪಿಸಿದರು.

ಪ್ರಧಾನಮಂತ್ರಿ ಮತ್ತು ಸಿಜೆ ಅವರ ಆಶಯದಂತೆ ಕೊಡವ ಭಾಷೆ ಸೇರಿದಂತೆ ಸ್ಥಳೀಯ ಭಾಷೆಗಳನ್ನು ಆಡಳಿತ ಮತ್ತು ನ್ಯಾಯಾಂಗದಲ್ಲಿ ಅಳವಡಿಸಿದರೆ, ಸರಕಾರಿ ಇಲಾಖೆಗಳಲ್ಲಿ ಸಾವಿರಾರು ಉದ್ಯೋಗಗಳು ಭಾಷಾಂತರಕಾರರಾಗಿ ಸೃಷ್ಟಿಯಾಗುತ್ತದೆ. ಇದರಿಂದ ನಿರುದ್ಯೋಗಿ ಯುವ ಪೀಳಿಗೆಗೆ ಉದ್ಯೋಗ ದೊರೆತಂತಾಗುತ್ತದೆ. ಕೊಡವ ಭಾಷೆಯನ್ನು ಆಡಳಿತದಲ್ಲಿ ಅಳವಡಿಸುವ ಬದ್ಧತೆ ಮತ್ತು ಚುರುಕುತನವನ್ನು ಪ್ರತಿಯೊಬ್ಬರು ಪ್ರದರ್ಶಿಸಬೇಕೆಂದು ನಾಚಪ್ಪ ಒತ್ತಾಯಿಸಿದರು.

ಭಾಷಾ ಬೆಳವಣಿಗೆ ವಿಚಾರದಲ್ಲಿ ಪ್ರಧಾನಮಂತ್ರಿ ಮತ್ತು ಸಿಜೆ ಅವರು ತೋರಿದ ಕಾಳಜಿ ನಮ್ಮ ಹೋರಾಟಕ್ಕೆ ಹೊಸ ಸ್ಫೂರ್ತಿಯನ್ನು ತುಂಬಿದAತಾಗಿದೆ ಎಂದು ತಿಳಿಸಿದರು.

ಸಿಎನ್‌ಸಿ ಪ್ರಮುಖರಾದ ಅಜ್ಜಿನಿಕಂಡ ಇನಿತಾ ಮಾಚಯ್ಯ, ಬೊಪ್ಪಂಡ ಬೊಳ್ಳಮ್ಮ ನಾಣಯ್ಯ, ಪಟ್ಟಮಾಡ ಲಲಿತಾ ಗಣಪತಿ, ಚೋಳಪಂಡ ಜ್ಯೋತಿ ನಾಣಯ್ಯ, ಲೆಫ್ಟಿನೆಂಟ್ ಕರ್ನಲ್ ಬಿ.ಎಂ.ಪಾರ್ವತಿ, ಕಲಿಯಂಡ ಪ್ರಕಾಶ್, ಬಾಚರಣಿಯಂಡ ಚಿಪ್ಪಣ್ಣ, ಅಜ್ಜಿಕುಟೀರ ಲೋಕೇಶ್, ಪುಟ್ಟಿಚಂಡ ದೇವಯ್ಯ, ಕೂಪದೀರ ಸಾಬು, ನಂದಿನೆರವAಡ ವಿಜು, ಪಟ್ಟಮಾಡ ಕುಶ, ಪುದಿಯೊಕ್ಕಡ ಕಾಶಿ, ಬಡುವಂಡ ವಿಜಯ, ಚೋಳಪಂಡ ನಾಣಯ್ಯ, ಅಜ್ಜಿನಂಡÀ ಪಾಪಣ್ಣ, ಕಾಟುಮಣಿಯಂಡ ಉಮೇಶ್, ನಂದಿನೆರವAಡ ಅಯ್ಯಣ್ಣ, ಮೇದುರ ಕಂಠಿ, ಅಪ್ಪಾರಂಡ ಪ್ರಸಾದ್, ಅಪ್ಪನೆರವಂಡ ಕಿರಣ್, ಅರೆಯಡ ಗಿರೀಶ್, ಚಂಬAಡ ಜನತ್, ಕಿರಿಯಮಾಡ ಶೆರಿನ್, ಮಣವಟ್ಟೀರ ಚಿನ್ನಪ್ಪ ಮತ್ತಿತರರು ಧರಣಿಯಲ್ಲಿ ಪಾಲ್ಗೊಂಡು ಕೊಡವ ಲ್ಯಾಂಡ್ ಮತ್ತು ಕೊಡವ ಭಾಷೆ ಪರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ ಅವರ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.