ಬೆಂಗಳೂರು, ಮೇ ೧೦: ರಾಜ್ಯದ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವ ಬಗ್ಗೆ ರಾಜ್ಯ ಸರ್ಕಾರ ಮಂಗಳವಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ಬರುವಂತೆ ಕ್ರಮ ವಹಿಸಲು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದೆ. ಈ ಸಂಬAಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮಾರ್ಗಸೂಚಿ ಆದೇಶ ಹೊರಡಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು, ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಡಿಜಿ ಹಾಗೂ ಐಜಿಪಿ, ಹೆಚ್ಚುವರಿ ಅಡ್ವೊಕೇಟ್ ಜನರಲ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ, ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಈ ಬಗ್ಗೆ ಸುದೀರ್ಘವಾಗಿ ಚರ್ಚಿಸಿದರು. ಈ ಸಂದರ್ಭ ಧ್ವನಿವರ್ಧಕಗಳ ಬಳಕೆ ಬಗ್ಗೆ ಸುಪ್ರೀಂಕೋರ್ಟ್ ಹೊರಡಿಸಿರುವ ಆದೇಶ, ರಾಜ್ಯ ಸರ್ಕಾರವು ಶಬ್ದ ಮಾಲಿನ್ಯ (ನಿಯಂತ್ರಣ ಮತ್ತು ನಿಯಂತ್ರಣ) ರೂಪಿಸಿರುವ ನಿಯಮಗಳ ಬಗ್ಗೆ ಚರ್ಚಿಸಿದ ಬಳಿಕ ಸರಕಾರದ ಮಾರ್ಗಸೂಚಿ ಪ್ರಕಟಿಸಲಾಯಿತು. ಶಬ್ದ ಮಾಲಿನ್ಯ (ನಿಯಂತ್ರಣ ಮತ್ತು ನಿಯಂತ್ರಣ) ನಿಯಮಗಳು, ೨೦೦೦,

(ಮೊದಲ ಪುಟದಿಂದ) ನಿಯಮ ೩(೧) ಅಡಿಯಲ್ಲಿ. ಹೇಳಿರುವಂತೆ ‘ಹಗಲಿನ ಸಮಯ’ ಎಂದರೆ ಬೆಳಗ್ಗೆ ೬ ರಿಂದ ಬೆಳಿಗ್ಗೆ ೧೦ ರವರೆಗೆ ಬಳಸಬಹುದು. ರಾತ್ರಿ ೧೦ ರಿಂದ ಬೆಳಗ್ಗಿನ ಜಾವ ೬ ರವರೆಗೆ ಸಾರ್ವಜನಿಕವಾಗಿ ಧ್ವನಿವರ್ಧಕ ಬಳಕೆ ಮಾಡುವಂತಿಲ್ಲ. ಉಳಿದ ಸಮಯದಲ್ಲಿ ಧ್ವನಿವರ್ಧಕ ಬಳಕೆ ಮಾಡಲು ಸಂಬAಧಿಸಿದ ಪ್ರಾಧಿಕಾರದಿಂದ ಅನುಮತಿ ಪಡೆದಿರಬೇಕು. ಮಾರ್ಗಸೂಚಿ ಪ್ರಕಾರ ಧ್ವನಿವರ್ಧಕಗಳು ಅಥವಾ ಸಾರ್ವಜನಿಕ ವಿಳಾಸ ವ್ಯವಸ್ಥೆಯನ್ನು ಬಳಸುವ ಎಲ್ಲಾ ಬಳಕೆದಾರರು ೧೫ ದಿನಗಳೊಳಗೆ ಗೊತ್ತುಪಡಿಸಿದ ಪ್ರಾಧಿಕಾರದಿಂದ ಲಿಖಿತ ಅನುಮತಿಯನ್ನು ಪಡೆಯಬೇಕು. ಪಡೆಯದವರು ಸ್ವಯಂಪ್ರೇರಣೆಯಿAದ ತೆಗೆದುಹಾಕಬೇಕು ಅಥವಾ ಗೊತ್ತುಪಡಿಸಿದ ಪ್ರಾಧಿಕಾರವು ತೆಗೆದುಹಾಕಲು ಕ್ರಮ ತೆಗೆದುಕೊಳ್ಳಬೇಕು. ಎಲ್ಲಾ ಪೊಲೀಸ್ ಕಮಿಷನರೇಟ್ ಪ್ರದೇಶಗಳಲ್ಲಿ ಸಹಾಯಕ ಪೊಲೀಸ್ ಕಮಿಷನರ್ ಜುರಿಸ್ಡಿಕ್ಷನಲ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರತಿನಿಧಿ. ಇತರ ಪ್ರದೇಶಗಳಲ್ಲಿ ಡಿವೈಎಸ್‌ಪಿ, ತಾಲೂಕು ದಂಡಾಧಿಕಾರಿ ತಹಶೀಲ್ದಾರ್ ಈ ಬಗ್ಗೆ ಕ್ರಮ ಕೈಗೊಳ್ಳಬಹುದು. ಲೌಡ್‌ಸ್ಪೀಕರ್‌ಗಳು ಮತ್ತು ಸಾರ್ವಜನಿಕ ವಿಳಾಸ ವ್ಯವಸ್ಥೆಯನ್ನು ಬಳಸುವ ಎಲ್ಲಾ ಆವರಣಗಳಿಗೆ ಇದು ಅನ್ವಯಿಸುತ್ತದೆ. ಇದನ್ನು ತಕ್ಷಣದ ಪರಿಣಾಮದೊಂದಿಗೆ ಕಾರ್ಯಗತಗೊಳಿಸಲು ಅಗತ್ಯವಿರುವ ಸರ್ಕಾರಿ ನಿರ್ದೇಶನಗಳನ್ನು ಸಂಬAಧಪಟ್ಟವರಿಗೆ ನೀಡಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.