*ಸಿದ್ದಾಪುರ, ಮೇ ೧೩: ವಾಲ್ನೂರು-ತ್ಯಾಗತ್ತೂರು ಗ್ರಾ.ಪಂ. ವ್ಯಾಪ್ತಿಯ ವಿವೇಕಾನಂದ ಯೂತ್ ಮೂವ್‌ಮೆಂಟ್ ವತಿಯಿಂದ ವಿಕಲಚೇತನರಿಗಾಗಿ ಕ್ರೀಡಾಕೂಟ ನಡೆಯಿತು.

ವಿವಿಧ ಸ್ಪರ್ಧೆಗಳ ನಂತರ ವಿಎಸ್‌ಎಸ್‌ಎನ್ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಯೂತ್ ಮೂವ್‌ಮೆಂಟ್‌ನ ಪದಾಧಿಕಾರಿಗಳಾದ ಸುರೇಶ್, ಹೇಮಂತ್, ವಿಕಲಚೇತನ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ, ಪಂಚಾಯಿತಿ ಅಧ್ಯಕ್ಷೆ ಅನಿತಾ, ಸದಸ್ಯರುಗಳಾದ ಮನು ಮಹೇಶ್, ದಮಯಂತಿ, ಕಾರ್ಯದರ್ಶಿ ರವಿ, ಅಭಿವೃದ್ಧಿ ಅಧಿಕಾರಿ ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.

ವರ್ಗಾವಣೆಗೊಂಡ ಸೂಪರ್ ವೈಸರ್ ಸುನಿತಾ ಅವರನ್ನು ಇದೇ ಸಂದರ್ಭ ಸನ್ಮಾನಿಸಿ ಗೌರವಿಸಲಾಯಿತು. ಇವರ ಕಾರ್ಯವೈಖರಿ ಮತ್ತು ಅರ್ಹ ಫಲಾನುಭವಿಗಳಿಗೆ ಸರಕಾರಿ ಸೌಲಭ್ಯ ದೊರಕಿಸಿಕೊಡುವಲ್ಲಿ ನೀಡಿದ ಸಹಕಾರದ ಬಗ್ಗೆ ಪ್ರಮುಖರು ಶ್ಲಾಘನೆ ವ್ಯಕ್ತಪಡಿಸಿದರು.