ಮಡಿಕೇರಿ, ಮೇ ೧೭: ಮಡಿಕೇರಿ-ಮಂಗಳೂರು ರಾಷ್ಟಿçÃಯ ಹೆದ್ದಾರಿ ಬದಿಯಲ್ಲಿ ಅಳಿವಿನಂಚಿನಲ್ಲಿರುವ ಜೀವಿಯಾದ ಜೀವಂತ ಚಿಪ್ಪು ಹಂದಿಗಳನ್ನು (ಪ್ಯಾಂಗೊಲಿನ್) ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿ.ಐ.ಡಿ. ಪೊಲೀಸ್ ಅರಣ್ಯ ಘಟಕ ಬಂಧಿಸಿದೆ.ರಾಜೇಶ್, ಕರಿಯ, ಸೂರ್ಯ, ಕೃಷ್ಣ ಬಂಧಿತ ಆರೋಪಿಗಳು. ತಾ. ೧೭ ರಂದು ಹೆದ್ದಾರಿ ಬದಿಯಲ್ಲಿ ಅಕ್ರಮವಾಗಿ ಚಿಪ್ಪು ಹಂದಿಗಳನ್ನು ಮಾರಾಟ ಮಾಡಲು ಆರೋಪಿಗಳು ಯತ್ನಿಸಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಐಡಿ ಪೊಲೀಸ್ ಅರಣ್ಯ ಘಟಕ ಸಿಬ್ಬಂದಿಗಳು ಚಿಪ್ಪುಹಂದಿ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.
(ಮೊದಲ ಪುಟದಿಂದ) ಸಿಐಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ. ಶರತ್ಚಂದ್ರ ನಿರ್ದೇಶನ, ಮಡಿಕೇರಿ ಪೊಲೀಸ್ ಅಧೀಕ್ಷಕ ಚಂದ್ರಕಾAತ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅರಣ್ಯ ಸಂಚಾರಿ ದಳದ ಪಿಎಸ್ಐ ಸಿ.ಯು. ಸವಿ, ಹೆಡ್ಕಾನ್ಸ್ಟೇಬಲ್ಗಳಾದ ಶೇಖರ್, ರಾಜೇಶ್, ಯೋಗೇಶ್, ಮೋಹನ್ ಮತ್ತು ಕಾನ್ಸ್ಟೇಬಲ್ಗಳಾದ ಸ್ವಾಮಿ, ಮಂಜುನಾಥ್ ಹಾಜರಿದ್ದರು.