ಶನಿವಾರಸಂತೆ, ಮೇ ೧೭: ಪಟ್ಟಣದ ವಿಶ್ವಕರ್ಮ ಸಮಾಜದ ವತಿಯಿಂದ ಶ್ರೀ ಕಾಳಿಕಾಂಬದೇವಿ ವಾರ್ಷಿಕೋತ್ಸವ, ಸಾಮೂಹಿಕ ಉಪನಯನ, ದೇವಿಗೆ ಸಾಮೂಹಿಕ ಕುಂಕುಮಾರ್ಚನೆ ಕಾರ್ಯಕ್ರಮ ತಾ. ೧೯ ರಂದು ಗುಡುಗಳಲೆ ಜಾತ್ರಾ ಮೈದಾನದ ಶ್ರೀ ಕಾಳಿಕಾಂಬ ದೇವಾಲಯ ಆವರಣದಲ್ಲಿ ನಡೆಯಲಿದೆ. ಬೆಳಿಗ್ಗೆ ೬ ಗಂಟೆಗೆ ಅರಕಲಗೂಡು ಸುಜ್ಞಾನಪೀಠದ ವಿಶ್ವಕರ್ಮ ಜಗದ್ಗುರು ಶಿವಸುಜ್ಞಾನ ತೀರ್ಥ ಸ್ವಾಮೀಜಿ, ಕಿರಿಕೊಡ್ಲಿಮಠದ ಸದಾಶಿವ ಸ್ವಾಮೀಜಿ, ಕಲ್ಲುಮಠದ ಮಹಾಂತ ಸ್ವಾಮೀಜಿ ಸಾನಿಧ್ಯದಲ್ಲಿ ಮಹಾಗಣಪತಿ ಪೂಜೆ, ಪುಣ್ಯಾಹವಾಚನ, ಮಾತೃಕಾನಂದಿ, ನವಗ್ರಹಾರಾಧನ, ಅಗ್ನಿಪ್ರತಿಷ್ಠಾಪನಾ, ಮಹಾಗಣಪತಿ ಹೋಮ, ದುರ್ಗಾ ಹೋಮ, ಸಾಹಿತ್‌ಯ ಯದೂಶ ಹೋಮ, ಚೌಲಹೋಮ, ಚೌಲಕರ್ಮ ಶುದ್ಧಿ, ಮಾತೃಸಹಭೋಜನ, ಯಜ್ಞೋಪವೀತ ಧಾರಣೆ, ಮಹಾ ಮಂಗಳಾರತಿ ಧಾರ್ಮಿಕ ಕಾರ್ಯಗಳು ನಡೆಯಲಿವೆ. ಮೈಸೂರಿನ ದಯಾನಂದ ಶರ್ಮ ಮತ್ತು ಸಂಗಡಿಗರ ಪೌರೋಹಿತ್ಯದಲ್ಲಿ ೧೦.೩೦ಕ್ಕೆ ಬ್ರಹ್ಮೋಪದೇಶ ಹಾಗೂ ೧೧.೩೦ಕ್ಕೆ ಮಹಿಳೆಯರಿಂದ ದೇವಿಗೆ ಸಾಮೂಹಿಕ ಕುಂಕುಮಾರ್ಚನೆ ನೆರವೇರಲಿದೆ.

೧೨ ಗಂಟೆಗೆ ವಿಶ್ವಕರ್ಮ ಸಮಾಜದ ಅಧ್ಯಕ್ಷ ಬಿ.ಬಿ. ನಾಗರಾಜ್ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಅತಿಥಿಗಳಾಗಿ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾದೇವಮ್ಮ, ಸದಸ್ಯ ಎಚ್.ಎಸ್. ಅಶೋಕ್, ಬಸವೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಡಿ.ಬಿ. ಧರ್ಮಪ್ಪ, ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಎಸ್.ಜೆ. ದೇವದಾಸ್, ವಿಶ್ವಕರ್ಮ ಸಮಾಜ ತಾಲೂಕು ಅಧ್ಯಕ್ಷ ಎಸ್.ಬಿ. ಯಶ್ವಂತ್, ರಾಜ್ಯ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮ ಜಿಲ್ಲಾ ನಾಮ ನಿರ್ದೇಶಕ ಹೆಚ್.ಎನ್. ಸುಬ್ರಮಣ್ಯ ಪಾಲ್ಗೊಳ್ಳುತ್ತಾರೆ. ಸಮಿತಿ ಗೌರವಾಧ್ಯಕ್ಷ ಲಕ್ಷö್ಮಣಾಚಾರ್ ಹಾಗೂ ಹಿರಿಯ ಪುರೋಹಿತ ಸೋಮಶೇಖರಾಚಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ವಿಶ್ವಕರ್ಮ ಸಮಾಜ ಪ್ರಕಟಣೆಯಲ್ಲಿ ತಿಳಿಸಿದೆ.