ಮಡಿಕೇರಿ, ಮೇ ೨೧: ಮಡಿಕೇರಿ ನಗರಸಭೆ ವತಿಯಿಂದ ಸ್ವಚ್ಛತಾ ಕಾರ್ಯದ ಕಸ ಸಂಗ್ರಹಣೆಗಾಗಿ ನೂತನವಾಗಿ ಖರೀದಿಸಲಾಗಿರುವ ಎರಡು ಟ್ರಾö್ಯಕ್ಟರ್‌ಗಳಿಗೆ ಪೂಜೆ ಸಲ್ಲಿಸಿ ಚಾಲನೆ ಮಾಡುವ ಮೂಲಕ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿದರು.

ನಗರಸಭೆ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ರೂ. ೧೨ ಲಕ್ಷ ವೆಚ್ಚದಲ್ಲಿ ೨ ಟ್ರಾö್ಯಕ್ಟರ್‌ಗಳನ್ನು ಖರೀದಿಸಲಾಗಿದೆ. ಮಡಿಕೇರಿಯನ್ನು ಪರಿಸರ ಪ್ರೇಮಿ ನಗರವನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರಯತ್ನಿಸಲಾಗಿದೆ. ಇದಕ್ಕೆ ಸಾರ್ವಜನಿಕರು ಕೈಜೋಡಿಸುವಂತಾಗಬೇಕು ಎಂದು ಅವರು ಕೋರಿದರು.

ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸಿ ಟ್ರಾö್ಯಕ್ಟರ್ ಬಂದ ಸಂದರ್ಭದಲ್ಲಿ ಒದಗಿಸಬೇಕು. ಪರಿಸರ ಶುಚಿತ್ವಕ್ಕೆ ಗಮನಹರಿಸಬೇಕು. ಪರಿಸರ ಶುಚಿತ್ವವಾಗಿದ್ದಲ್ಲಿ ಉತ್ತಮ ಆರೋಗ್ಯ ಕಾಪಾಡಬಹುದು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರ ಆರೋಗ್ಯ ಕಾಪಾಡಲು ಹಾಗೂ ಸಾಂಕ್ರಾಮಿಕ ರೋಗಗಳಿಂದ ದೂರವಿರಲು ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡುವಂತಾಗಬೇಕು. ಮುಂದಿನ ದಿನಗಳಲ್ಲಿ ಟಿಪ್ಪರ್ ಲಾರಿಯನ್ನು ತರಿಸಲಾಗುವುದು ಎಂದು ಶಾಸಕರು ತಿಳಿಸಿದರು. ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ, ಮಡಿಕೇರಿ ನಗರದ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಆ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು.

ನಗರಸಭೆ ಉಪಾಧ್ಯಕ್ಷೆ ಸವಿತಾ ರಾಕೇಶ್, ಪೌರಾಯುಕ್ತ ಎಸ್.ವಿ. ರಾಮದಾಸ್, ನಗರಸಭಾ ಸದಸ್ಯರು, ಇಂಜಿನಿಯರ್‌ಗಳು ಇತರರು ಇದ್ದರು.