ಸೋಮವಾರಪೇಟೆ, ಮೇ ೨೪ : ವಿದ್ಯಾರ್ಥಿಗಳು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿದರೆ ಸಾಧನೆ ಸಾಧ್ಯ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಅಭಿಪ್ರಾಯಿಸಿದರು.

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ೬೨೧ ಅಂಕ ಗಳಿಸಿದ ಕಿರಿಕೊಡ್ಲಿ ಸದಾಶಿವ ಸ್ವಾಮೀಜಿ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿನಿ ಬಿ.ವಿ. ಮಾನ್ಯಶ್ರೀಯನ್ನು ಸನ್ಮಾನಿಸಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನದಲ್ಲಿ ಎಸ್.ಎಸ್.ಎಲ್.ಸಿ. ಹಂತವು ಮಹತ್ತರವಾದ ಘಟ್ಟವಾಗಿದ್ದು, ಈ ಹಂತದಲ್ಲಿ ಶ್ರದ್ಧೆ ಹಾಗೂ ಏಕಾಗ್ರತೆ ಅತೀ ಮುಖ್ಯ. ಇದನ್ನು ಮನಗಂಡು ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ತೊಡಗಬೇಕು ಎಂದರು. ಈ ಸಂದರ್ಭ ಪೋಷಕರಾದ ವಸಂತ್ ಹಾಗೂ ಕುಮುದ ಉಪಸ್ಥಿತರಿದ್ದರು.