ಕೂಡಿಗೆ, ಮೇ ೨೫: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ತಾಲೂಕು ಮಟ್ಟದ ಕಾರ್ಯಕ್ರಮವು ಕುಶಾಲನಗರ ತಾಲೂಕು ತಹಶೀಲ್ದಾರ್ ಹಾಗೂ ದಂಡಾಧಿಕಾರಗಳ ಸಮ್ಮುಖದಲ್ಲಿ ತಾ.೨೭ರಂದು ಹುದುಗೂರು ಗ್ರಾಮದ ಆಟದ ಮೈದಾನದ ಸಭಾಂಗಣದಲ್ಲಿ ನಡೆಯಲಿದೆ.

ಹುದುಗೂರು ಗ್ರಾಮಕ್ಕೆ ಸಂಬAಧಿಸಿದAತೆ ಕಂದಾಯ ಇಲಾಖೆ, ಭೂಮಾಪನಾ ಇಲಾಖೆಯ ಪಹಣಿಯಲ್ಲಿನ ಲೋಪದೋಷಗಳ ತಿದ್ದುಪಡಿ, ಪೌತಿ ಖಾತೆ, ವೇತನ, ಅಂತ್ಯ ಸಂಸ್ಕಾರದ ಪರಿಹಾರ ಧನ, ರಾಷ್ಟಿçÃಯ ಕುಟುಂಬ ನೆರವು ಯೋಜನೆ, ಸರಕಾರಿ ಜಮೀನಿನ ಒತ್ತುವರಿ ತೆರವುಗೊಳಿಸುವುದು, ಪಡಿತರ ಚೀಟಿಯಲ್ಲಿ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಪರಿಹಾರ ಕಾರ್ಯವನ್ನು ಕೈಗೊಳ್ಳಲು ವಿವಿಧ ಯೋಜನೆಗಳ ಬಗ್ಗೆ ಮಾಹಿತಿಯನ್ನು ತಿಳಿಸಲು ಸಭೆಯನ್ನು ಏರ್ಪಡಿಸಲಾಗಿದೆ.

ಈ ಸಭೆಗೆ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಕಂದಾಯ ಇಲಾಖೆ ಮಾಹಿತಿ ನೀಡಿದೆ.