ಮಡಿಕೇರಿ, ಮೇ ೨೫: ಕೊಡಗು ಜಿಲ್ಲಾ ಪೊನ್ನಂಪೇಟೆ ತಾಲೂಕು ಗೋಣಿಕೊಪ್ಪ ಪೊಲೀಸ್ ಠಾಣಾ ಸರಹದ್ದಿನ ದೇವರಪುರ ಗ್ರಾಮ ಪಂಚಾಯಿತಿ ವ್ಯಾಪಿಗೆ ಸೇರುವ ದೇವರಪುರ ಗ್ರಾಮದಲ್ಲಿ ತಾ. ೨೬ ರಂದು ಶ್ರೀ ಅಯ್ಯಪ್ಪ ಮತ್ತು ಭದ್ರಕಾಳಿ ದೇವರ ಬೇಡು(ಕುಂಡೆ)ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ ೧೯೬೫ರ ಕಲಂ ೨೧ ರಲ್ಲಿ ದತ್ತವಾದ ಅಧಿಕಾರದಂತೆ ತಾ. ೨೫ ರ ಮಧ್ಯ ರಾತ್ರಿಯಿಂದ ಮೇ, ೨೬ ರ ಮಧ್ಯರಾತ್ರಿಯವರೆಗೆ ಗೋಣಿಕೊಪ್ಪ ದೇವರಪುರ ಮತ್ತು ಸುತ್ತಮುತ್ತಲಿನ ೧೦ ಕಿ.ಮೀ. ವ್ಯಾಪ್ತಿಯ ಬಾಳೆಲೆ, ಪೊನ್ನಂಪೇಟೆ, ತಿತಿಮತಿ ಮತ್ತು ಪಾಲಿಬೆಟ್ಟ ಗ್ರಾಮಗಳಲ್ಲಿರುವ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್ ಮತ್ತು ಕ್ಲಬ್‌ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಆದೇಶ ಹೊರಡಿಸಿದ್ದಾರೆ.