ಮಡಿಕೇರಿ, ಜೂ. ೮: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜನಾರೋಗ್ಯ ಸಂಸ್ಥೆ, ಎಪಿಡೀಮಿಯಾಲಾಜಿ ವಿಭಾಗ "ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ಸರ್ಕಾರದ ಅನುದಾನಿತ ಯೋಜನೆಯಾದ ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ ಅಡಿಯಲ್ಲಿ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
೨೧ ರಿಂದ ೩೫ ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರುವ, ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವ ಸಮುದಾಯದಲ್ಲಿ ಕೆಲಸ ಮಾಡಲು ಅಸಕ್ತಿ ಇರುವ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ ಸಮುದಾಯದಲ್ಲಿ ಯುವಜನರಿಗೆ ತರಬೇತಿಯಂತಹ ಕಾರ್ಯಕ್ರಮಗಳನ್ನು ನಡೆಸಲು ಆಸಕ್ತಿ ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ ಅರ್ಹತಾ ಮಾನದಂಡಗಳನ್ನು ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ-ವಿವರಗಳು ಮತ್ತು ಅಂಕಪಟ್ಟಿಗಳನ್ನು ತಾ. ೧೦ ರೊಳಗೆ ಯುವ ಸ್ಪಂದನ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿ ಇಲ್ಲಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ, ಕ್ರೀಡಾಂಗಣ ಕೊಡಗು, ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ ೦೮೨೭೨-೨೨೫೯೮೫, ಎಂ. ಚೇತನ್ ಕ್ಷೇತ್ರ ಸಂಪರ್ಕಾಧಿಕಾರಿ ಯುವ ಸ್ಪಂದನ ಕಾರ್ಯಕ್ರಮ ಮೊ. ೯೭೩೧೯೪೭೮೨೮ ಹಾಗೂ ಜಯಶ್ರೀ ಎಂ. ೯೫೩೫೨೮೯೬೮೯ ಯುವ ಸಮಾಲೋಚಕರನ್ನು ಸಂಪರ್ಕಿಸಬಹುದು. ಕುಶಾಲನಗರ ಸ್ಥಳೀಯ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಜಿ.ಎಸ್. ಗುರುಸ್ವಾಮಿ ತಿಳಿಸಿದ್ದಾರೆ.