ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ: ಸಿಎಂ ಬೊಮ್ಮಾಯಿ ಸಭೆ
ಬೆಂಗಳೂರು, ಜೂ. ೧೫: ಪ್ರಧಾನಿ ನರೇಂದ್ರ ಮೋದಿ ಅವರು ತಾ. ೨೦ ರಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅರಮನೆ ಮೈದಾನದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಕರೆಯಲಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಪ್ರವಾಸದ ಕುರಿತ ಪೂರ್ವ ಸಿದ್ಧತೆ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದರು. ಪೂರ್ವ ಸಿದ್ಧತಾ ಸಭೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಪ್ರಧಾನಿಗಳು ಬಹಳ ದಿನಗಳ ನಂತರ ರಾಜ್ಯಕ್ಕೆ ಬರುತ್ತಿದ್ದಾರೆ. ಅವರು ಬೇರೆ ರಾಜ್ಯಗಳಿಗೆ ಹೋದಾಗ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ನಂತರ ಪ್ರವಾಸ ಕೈಗೊಂಡಿದ್ದಾರೆ. ಬಿಜೆಪಿ ಇಲ್ಲದ ಕಡೆಯೂ ದೊಡ್ಡ ಬೆಂಬಲ ಅವರಿಗೆ ಸಿಕ್ಕಿದೆ. ಇದು ಮುಂದಿನ ಲೋಕಸಭಾ ಚುನಾವಣೆಯ ದಿಕ್ಸೂಚಿ. ನಮ್ಮ ರಾಜ್ಯದಲ್ಲಿ ಮುಂದೆ ಚುನಾವಣೆ ಬರುತ್ತಿದೆ. ಈ ವರ್ಷ ಚುನಾವಣಾ ವರ್ಷ ಕೂಡ. ಅವರ ಈ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಬೇಕು. ಯಲಹಂಕದಿAದ ಪ್ರಧಾನಿ ಬರುವಾಗ ಅಲ್ಲಿ ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರಿಂದ ಸ್ವಾಗತ ಕೋರಬೇಕು ಎಂದು ಹೇಳಿದರು. ಸಾರ್ವಜನಿಕ ಸಭೆಗೆ ೫೦ ರಿಂದ ೬೦ ಸಾವಿರ ಜನ ಸೇರಿಸುವ ಗುರಿ ಹೊಂದಿದ್ದೇವೆ. ಅಲ್ಲಿ ಜನರಿಗೆ ಸರ್ಕಾರದಿಂದ ಅಗತ್ಯ ವ್ಯವಸ್ಥೆ ಆಗುತ್ತದೆ. ಎಲ್ಲಾದರೂ ಒಂದು ಕಡೆ ರೋಡ್ ಶೋಗೂ ಸಿದ್ಧತೆ ಆಗಬೇಕು. ೧೮ನೇ ತಾರೀಕಿನ ಒಳಗೆ ಎಲ್ಲ ರೀತಿಯ ಸಿದ್ಧತೆ ಆಗಬೇಕು. ಪ್ರಧಾನಿಗಳ ಕಾರ್ಯಕ್ರಮ ಗಂಭೀರವಾಗಿ ತೆಗೆದುಕೊಂಡು, ಶ್ರಮವಹಿಸಿ ಜನರನ್ನು ಸೇರಿಸಬೇಕು ಎಂದು ಬೆಂಗಳೂರು ಪಕ್ಷದ ನಾಯಕರಿಗೆ ಸಿಎಂ ಬೊಮ್ಮಾಯಿ ಕರೆ ನೀಡಿದರು.
ರಾಹುಲ್ ಗಾಂಧಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ನವದೆಹಲಿ, ಜೂ. ೧೫: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬAಧಿಸಿದAತೆ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಭಾರೀ ಪ್ರತಿಭಟನೆ ನಡೆಸುತ್ತಿದ್ದು, ದೆಹಲಿ ಪೊಲೀಸರು ಪ್ರತಿಭಟನಾನಿರತ ಹಿರಿಯ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ಇಂದು ಸತತ ಮೂರನೇ ದಿನವೂ ವಿಚಾರಣೆಗೆ ಒಳಪಡಿಸಿದೆ. ರಾಜಸ್ಥಾನದ ಕಾಂಗ್ರೆಸ್ ಶಾಸಕ ಮುಖೇಶ್ ಭಾಕರ್ ಅವರು ಸಚಿನ್ ಪೈಲಟ್ ಬಂಧನದ ವೀಡಿಯೋವನ್ನು ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರನ್ನು ಪಕ್ಷದ ಪ್ರಧಾನ ಕಚೇರಿ ಮತ್ತು ಇಡಿ ಕಚೇರಿಯ ಹೊರಗೆ ಬಂಧಿಸಲಾಯಿತು, ರಾಹುಲ್ ಗಾಂಧಿಯನ್ನು ಬೆಂಬಲಿಸಿ ಪ್ರತಿಭಟನೆಗಳನ್ನು ನಡೆಸಿ, ಘೋಷಣೆಗಳನ್ನು ಕೂಗಿದರು. ದೆಹಲಿ ಪೊಲೀಸರು ಯುವ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನು ಎಳೆದೊಯ್ದು ಬಂಧನಕ್ಕೊಳಪಡಿಸುತ್ತಿದ್ದಾರೆ.
ಕೇAದ್ರ ಸಶಸ್ತç ಪೊಲೀಸ್ ಪಡೆ, ಅಸ್ಸಾಂ ರೈಫಲ್ಸ್ ನೇಮಕಾತಿಯಲ್ಲಿ ‘ಅಗ್ನಿವೀರ'ರಿಗೆ ಆದ್ಯತೆ
ನವದೆಹಲಿ, ಜೂ. ೧೫: ವಿಶೇಷ ‘ಅಗ್ನಿಪಥ್' ಯೋಜನೆಯಡಿ ಅಲ್ಪಾವಧಿ ಒಪ್ಪಂದದಡಿಯಲ್ಲಿ ಭೂಸೇನೆ, ನೌಕಾಪಡೆ ಮತ್ತು ವಾಯುಸೇನೆಯಲ್ಲಿ ನೇಮಕಗೊಂಡಿರುವ ‘ಅಗ್ನಿವೀರ್' ಸೈನಿಕರು ಕೇಂದ್ರ ಸಶಸ್ತç ಪೊಲೀಸ್ ಪಡೆಗಳಿಗೆ (ಸಿಎಪಿಎಫ್) ಮತ್ತು ಅಸ್ಸಾಂ ರೈಫಲ್ಸ್ಗೆ ನೇಮಕಾತಿಯಲ್ಲಿ ಆದ್ಯತೆಯನ್ನು ಪಡೆಯುತ್ತಾರೆ ಎಂದು ಕೇಂದ್ರ ಗೃಹ ಸಚಿವಾಲಯ ಘೋಷಣೆ ಮಾಡಿದೆ. ಈ ಯೋಜನೆಯಡಿ ನಾಲ್ಕು ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದವರಿಗೆ ನೇಮಕಾತಿ ಪ್ರಕ್ರಿಯೆಯಲ್ಲಿ ಆದ್ಯತೆ ನೀಡಲಾಗುವುದು ಎಂದು ಗೃಹ ಸಚಿವಾಲಯ ಹೇಳಿದ್ದು, ರಾಷ್ಟçವು ಎದುರಿಸುತ್ತಿರುವ ಭವಿಷ್ಯದ ಭದ್ರತಾ ಸವಾಲುಗಳನ್ನು ಎದುರಿಸಲು ಫಿಟ್ಟರ್ ಮತ್ತು ಕಿರಿಯ ಪಡೆಗಳನ್ನು ತರಲು ದಶಕಗಳ ಹಳೆಯ ಆಯ್ಕೆ ಪ್ರಕ್ರಿಯೆಯ ಪ್ರಮುಖ ಕೂಲಂಕಷ ಪರೀಕ್ಷೆಯಲ್ಲಿ ಸರ್ಕಾರವು ಮಂಗಳವಾರ ಈ ಪರಿವರ್ತನಾ ಯೋಜನೆಯನ್ನು ಅನಾವರಣಗೊಳಿಸಿದೆ. ಈ ಯೋಜನೆಯಡಿಯಲ್ಲಿ ಈ ವರ್ಷ ಸುಮಾರು ೪೬,೦೦೦ ಸೈನಿಕರನ್ನು ೧೭ ಮತ್ತು ಒಂದೂವರೆ ವರ್ಷ ಮತ್ತು ೨೧ ವರ್ಷಗಳ ನಡುವಿನ ಮೂರು ಸೇವೆಗಳಿಗೆ ನೇಮಿಸಿಕೊಳ್ಳಲಾಗುವುದು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಗೃಹ ಸಚಿವ ಅಮಿತ್ ಶಾ ಅವರ ಕಚೇರಿ ಬುಧವಾರ ಟ್ವೀಟ್ನಲ್ಲಿ, ಅಗ್ನಿಪಥ್ ಯೋಜನೆಯು ದೇಶದ ಯುವಜನರ ಉಜ್ವಲ ಭವಿಷ್ಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಮತ್ತು ಸ್ವಾಗತಾರ್ಹ ನಿರ್ಧಾರವಾಗಿದೆ. ಈ ಹಿನ್ನೆಲೆಯಲ್ಲಿ, ಇಂದು ಗೃಹ ವ್ಯವಹಾರಗಳ ಸಚಿವಾಲಯವು ಈ ಯೋಜನೆಯಡಿಯಲ್ಲಿ ನಾಲ್ಕು ವರ್ಷಗಳನ್ನು ಪೂರೈಸಿದ ಅಗ್ನಿವೀರ್ಗಳಿಗೆ ಸಿಆರ್ಪಿಎಫ್ ಮತ್ತು ಅಸ್ಸಾಂ ರೈಫಲ್ಸ್ ನೇಮಕಾತಿಯಲ್ಲಿ ಆದ್ಯತೆ ನೀಡಲು ನಿರ್ಧರಿಸಿದೆ ಎಂದು ಟ್ವೀಟ್ ಮಾಡಿದೆ. ಗೃಹ ಸಚಿವಾಲಯದ ಈ ನಿರ್ಧಾರದಿಂದ, ಪ್ರಧಾನ ಮಂತ್ರಿಗಳ ಮಾರ್ಗದರ್ಶನದಲ್ಲಿ, ಅಗ್ನಿಪಥ್ ಯೋಜನೆಯಡಿ ತರಬೇತಿ ಪಡೆದ ಯುವಕರು ದೇಶದ ಸೇವೆ ಮತ್ತು ಭದ್ರತೆಯಲ್ಲಿ ಮತ್ತಷ್ಟು ಕೊಡುಗೆ ನೀಡಲು ಸಾಧ್ಯವಾಗುತ್ತದೆ. ಈ ನಿರ್ಧಾರದ ಕುರಿತು ವಿವರವಾದ ಯೋಜನೆ ಕಾರ್ಯವನ್ನು ಪ್ರಾರಂಭಿಸಲಾಗಿದೆ ಎಂದು ಟ್ವೀಟ್ ಮಾಡಿದೆ.
ಒಂಟಿ ಮನೆ ಯೋಜನೆ ಪುನರ್ ಪ್ರಾರಂಭಕ್ಕೆ ನಿರ್ಧಾರ
ಬೆಂಗಳೂರು, ಜೂ. ೧೫: ಬಡವರಿಗೆ ಹಾಗೂ ಹಿಂದುಳಿದವರಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯ ಒದಗಿಸುವ ಉದ್ದೇಶದಿಂದ ಬಿಬಿಎಂಪಿ ವತಿಯಿಂದ ಹಿಂದೆ ಅನುಷ್ಠಾನ ಮಾಡಿದ್ದ ಒಂಟಿ ಮನೆ ಯೋಜನೆಯನ್ನು ಪುನರ್ ಪ್ರಾರಂಭಿಸಲು ನಿರ್ಧರಿಸಲಾಗಿದೆ. ಈ ಕುರಿತ ಆದೇಶ ಶೀಘ್ರವಾಗಿ ಹೊರಬೀಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕೋವಿಡ್ ಸಾಂಕ್ರಾಮಿಕದಿAದಾಗಿ ನಿಂತು ಹೋಗಿದ್ದ ಯೋಜನೆಯನ್ನು ಪ್ರಾರಂಭಿಸುವುದರಿAದ ಸ್ಥಳವಿದ್ದವರು ಒಂಟಿ ಮನೆ ನಿರ್ಮಾಣ ಮಾಡಿಕೊಳ್ಳಲು ಸಹಾಯವಾಗಲಿದೆ. ಪ್ರತಿ ವಾರ್ಡಿಗೆ ಮನೆಗಳ ಸಂಖ್ಯೆಯನ್ನು ನಿಗದಿ ಮಾಡಲಾಗುವುದು ಎಂದರು. ಬೆಂಗಳೂರಿನ ಮೂಲಭೂತ ಸೌಕರ್ಯ ಹಾಗೂ ನಾಗರಿಕರಿಗೆ ಕಾನೂನಿನ ತೊಡಕುಗಳನ್ನು ಸರಿಪಡಿಸಿ ಬೆಂಗಳೂರಿನ ಅಂರ್ರಾಷ್ಟಿçÃಯ ಮಟ್ಟದ ಖ್ಯಾತಿಗೆ ಗರಿ ಮೂಡಿಸಲು ಇನ್ನಷ್ಟು ಕಾರ್ಯ ಕ್ರಮಗಳನ್ನು ಜೋಡಿಸಲಾಗುತ್ತಿದೆ. ನಗರಕ್ಕೆ ತನ್ನದೇ ಆರೋಗ್ಯ ವ್ಯವಸ್ಥೆಯನ್ನು ರೂಪಿಸಲಾಗಿದೆ. ಏಕಸಾಮ್ಯ ಆಡಳಿತ ತರುವ ಕೆಲಸ, ೨೦ ಶಾಲೆಗಳನ್ನು ಆಧುನಿಕರಣ ಮಾಡಲಾಗುತ್ತಿದೆ. ಶಿಕ್ಷಣ, ಆರೋಗ್ಯ ಹಾಗೂ ಮೂಲಭೂತ ಸೌಕರ್ಯ, ಸೌಂದರೀಕರಣವನ್ನು ಬೆಂಗಳೂರಿನ ನಾಗರಿಕರಿಗೆ ಅನು ಕೂಲವಾಗುವ ನಿಟ್ಟಿನಲ್ಲಿ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.