ಮಡಿಕೇರಿ, ಜೂ. ೨೨: ಕೆಲವು ದಿನಗಳ ಹಿಂದೆ ಸಿದ್ದಾಪುರದ ಉರಗ ರಕ್ಷಕ ಸುರೇಶ್ ಅವರು ಸಿದ್ದಾಪುರದ ಮೈಸೂರು ರಸ್ತೆ ಬಡಾವಣೆಯಲ್ಲಿ ಕೊಳಕು ಮಂಡಲ ಹಾವನ್ನು ಜೆಸಿಬಿ ಮುಖಾಂತರ ರಕ್ಷಣೆ ಮಾಡಿದರು. ಹಾವನ್ನು ಹಿಡಿಯುವ ಸಂದರ್ಭದಲ್ಲಿ ಸಣ್ಣಪುಟ್ಟ ಗಾಯಗಳು ಆಗಿದ್ದ ಹಿನ್ನೆಲೆ ಅದನ್ನು ಸಿದ್ದಾಪುರದ ತಕ್ಷ ಉರಗ ರಕ್ಷಕರ ತಂಡದ ಸ್ನೇಕ್ ಸುರೇಶ್ ಅವರ ಮನೆಯಲ್ಲಿ ಇರಿಸಿ ೨ ದಿನಗಳ ಕಾಲ ಚಿಕಿತ್ಸೆ ನೀಡಿದರು. ಆ ಸಂದರ್ಭ ಹಾವು ೪೧ ಮರಿಗಳಿಗೆ ಜನ್ಮ ನೀಡಿದೆ. ಅವುಗಳಿಗೆ ಚಿಕಿತ್ಸೆ ನೀಡಿ ಸುರಕ್ಷಿತವಾಗಿ ನೋಡಿಕೊಳ್ಳುವಲ್ಲಿ ತಕ್ಷ ಉರಗ ರಕ್ಷಕರು ತಂಡದ ಸದಸ್ಯರುಗಳು ಯಶಸ್ವಿಯಾಗಿದ್ದಾರೆ.

ಪೊನ್ನಂಪೇಟೆ ನಿವಾಸಿ ಸ್ನೇಕ್ ನವೀನ ರಾಕಿ ಮತ್ತು ಸ್ನೇಕ್ ವಿನೋದ್ ಬಾವೆ, ಸ್ನೇಕ್ ಮನೋಜ್, ಸ್ನೇಕ್ ರೋಷನ್ ಅವರುಗಳು ಕೊಳಕು ಮಂಡಲ ಹಾವು ಮತ್ತು ೪೧ ಮರಿಗಳನ್ನು ಅರಣ್ಯ ಅಧಿಕಾರಿ ಉಮಾಶಂಕರ್ ಅವರ ನೇತೃತ್ವದಲ್ಲಿ ತಿತಿಮತಿ ಅರಣ್ಯಕ್ಕೆ ಬಿಟ್ಟರು.