ಕಣಿವೆ, ಜೂ. ೨೩: ಕೂಡುಮಂಗಳೂರು ಗ್ರಾ.ಪಂ ನ ಕೂಡ್ಲೂರು ಬಸವೇಶ್ವರ ಬಡಾವಣೆಯಲ್ಲಿ ಮಳೆಗೆ ಬರೆ ಕುಸಿದ ಪರಿಣಾಮ ಮನೆಯ ಮೇಲ್ಚಾವಣಿ ಹಾನಿಗೊಳಗಾದÀ ಘಟನೆ ನಡೆದಿದೆ.

ಬಡಾವಣೆಯ ನಿವಾಸಿ ಲತಾ ವೆಂಕಟೇಶ್ ಅವರ ಮನೆಯ ಮೇಲ್ಚಾವಣಿ ಮುರಿದು ಬಿದ್ದಿದೆ.

ಸ್ಥಳಕ್ಕೆ ವಾರ್ಡ್ ಸದಸ್ಯ ಕೆ.ಬಿ. ಶಂಷುದ್ಧೀನ್, ಕಂದಾಯ ಇಲಾಖೆಯ ಗ್ರಾಮಲೆಕ್ಕಿಗ ಗುರುದರ್ಶನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭ ಕಂದಾಯ ಇಲಾಖೆಯ ಸಿಬ್ಬಂದಿ ಲೋಕೇಶ್ ಹಾಗೂ ಗ್ರಾಮಸ್ಥರು ಇದ್ದರು.