ಮಡಿಕೇರಿ, ಜು. ೧೫: ಕಳೆದ ೧೫ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ದಕ್ಷಿಣ ಕೊಡಗಿನಲ್ಲಿ ಕಾಫಿ ಬೆಳೆಗೆ ನಷ್ಟ ಸಂಬAಧ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ನಿರ್ದೇಶನದಂತೆ, ಚೆಟ್ಟಳ್ಳಿಯ ಕಾಫಿ ಸಂಶೋಧನಾ ಉಪ ಕೇಂದ್ರದ ವಿಜ್ಞಾನಿಗಳಾದ ಬಾ.ರಾಜೀವ್ ಪಾಟಿ, ಮುಖಾರಿಬ್ ಅವರ ತಂಡವು ಗೋಣಿಕೊಪ್ಪಲಿನ ಕಾಫಿ ಮಂಡಳಿಯ ಉಪ ನಿರ್ದೇಶಕರಾದ ಡಾ.ಶ್ರೀದೇವಿ ಮಾರ್ಗದರ್ಶನದಲ್ಲಿ ಮುಂಗಾರು ಭಾಗದ ಹುದಿಕೇರಿ, ಬೇಲೂರು, ಹೈಸೊಡ್ಲೂರು, ಪೆರಾಡು, ಪರಕಟಗೇರಿ, ಬಿರುನಾಣಿ, ಬಾಡಗರಕೇರಿ, ಕುರ್ಚಿ, ಬೀರುಗ, ಟಿ.ಶೆಟ್ಟಿಗೇರಿ, ತಾವಳಗೇರಿ, ಹರಿಹರ ಮತ್ತಿತರ ಗ್ರಾಮಗಳಿಗೆ ಭೇಟಿ ನೀಡಿ ಕಾಫಿ ಬೆಳೆಯ ನಷ್ಟದ ಸಮೀಕ್ಷೆ ನಡೆಸಿದರು. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಕಾಫಿ ಬೆಳೆ ನಷ್ಟ, ಜೊತೆಗೆ ಕೊಳೆ ರೋಗವು ಹರಡುವ ಸಾಧ್ಯತೆ ಇದೆ. ಆ ನಿಟ್ಟಿನಲ್ಲಿ ಕೊಳೆ ರೋಗ ನಿಯಂತ್ರಣ ಮಾಡುವಲ್ಲಿ ಅಗತ್ಯ ಕ್ರಮವಹಿಸಬೇಕಿದೆ ಎಂದು ಡಾ.ಶ್ರೀದೇವಿ ಅವರು ತಿಳಿಸಿದ್ದಾರೆ.