ಮಡಿಕೇರಿ, ಜು.೧೫: ರಾಷ್ಟçದ ೭೫ನೇ ವರ್ಷದ ಸ್ವಾತಂತ್ರö್ಯ ದಿನಾಚರಣೆಯ ‘ಅಜಾದಿ ಕಾ ಅಮೃತ ಮಹೋತ್ಸವ’ ಪ್ರಯುಕ್ತ ಭಾರತ ಸರ್ಕಾರವು ೧೮ ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಮುಂಜಾಗ್ರತಾ ಲಸಿಕೆ(೩ನೇ ಲಸಿಕೆ) ನೀಡುವ ಕಾರ್ಯಕ್ರಮವನ್ನು ಆರಂಭಿಸಿದ್ದು, ಈ ಮುನ್ನೆಚ್ಚರಿಕಾ ಲಸಿಕೆಯನ್ನು ೧೮ ವರ್ಷ ಮೇಲ್ಪಟ್ಟವರೆಲ್ಲರೂ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಕೋರಿದ್ದಾರೆ.
ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಸೆಪ್ಟೆಂಬರ್, ೩೦ ರವರೆಗೆ(೭೫ ದಿನಗಳ ಕಾಲ) ಲಸಿಕಾ ಅಭಿಯಾನ ನಡೆಯಲಿದೆ. ಜಿಲ್ಲೆಯ ಎಲ್ಲಾ ಪ್ರಾಥಮಿಕ, ಸಮುದಾಯ, ೩ಐದನೇ ಪುಟಕ್ಕೆ
(ಮೊದಲ ಪುಟದಿಂದ) ಜಿಲ್ಲಾ, ತಾಲ್ಲೂಕು ಆಸ್ಪತ್ರೆಗಳಲ್ಲಿ ಮುನ್ನೆಚ್ಚರಿಕಾ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತದೆ. ಈ ಅವಕಾಶವನ್ನು ೧೮ ವರ್ಷ ಮೇಲ್ಪಟ್ಟವರು ಬಳಸಿ ಕೊಳ್ಳುವಂತಾಗಬೇಕು ಎಂದು ಮನವಿ ಮಾಡಿದರು.
ಕೊಡಗು ಜಿಲ್ಲೆಯಲ್ಲಿ ಈಗಾಗಲೇ ೨ ನೇ ಡೋಸ್(ವರಸೆ) ಪಡೆದು ೬ ತಿಂಗಳು ಪೂರ್ಣ ಗೊಂಡಿರುವ ೧೮ ವರ್ಷ ಮೇಲ್ಪಟ್ಟ ೨,೮೯,೮೮೩ ಫಲಾನುಭವಿಗಳು ಮುಂಜಾಗ್ರತಾ ಲಸಿಕೆ ಪಡೆಯಲು ಬಾಕಿ ಇದ್ದಾರೆ. ಇವರು ಸಮೀಪದ ಆರೋಗ್ಯ ಕೇಂದ್ರದಲ್ಲಿ ಲಸಿಕೆ ಪಡೆಯಬಹುದಾಗಿದೆ, ಬುಧವಾರ ಮತ್ತು ಶುಕ್ರವಾರ ಲಸಿಕಾ ಮೇಳವೂ ನಡೆಯಲಿದ್ದು, ಆ ಸಂದರ್ಭದಲ್ಲಿಯೂ ಸಹ ಮುಂಜಾಗ್ರತಾ ಲಸಿಕೆ ಪಡೆಯಬಹುದಾಗಿದ್ದು, ಅಜಾದಿ ಕಾ ಅಮೃತ ಮಹೋತ್ಸವ ಲಸಿಕಾ ಯಶಸ್ವಿಗೆ ಸಹಕರಿಸುವಂತೆ ಕೋರಿದರು.
ಜಿಲ್ಲೆಯಲ್ಲಿ ಈಗಾಗಲೇ ಪ್ರಥಮ ಮತ್ತು ದ್ವಿತೀಯ ಡೋಸ್ ಲಸಿಕಾಕರಣದಲ್ಲಿ ಶೇ.೧೦೦ ರಷ್ಟು ಪ್ರಗತಿ ಸಾಧಿಸಲಾಗಿದೆ. ಕೋವಿಡ್-೧೯ ನಿಯಂತ್ರಣ ಲಸಿಕೆ ಪಡೆಯುವುದರಿಂದ ಯಾವುದೇ ರೀತಿಯ ಅಡ್ಡಪರಿಣಾಮ ಇರುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಜಿಲ್ಲಾ ಲಸಿಕಾ ಅಧಿಕಾರಿ ಡಾ.ಗೋಪಿನಾಥ್ ಮಾತನಾಡಿ; ಸಂಘ ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದಲ್ಲಿ, ವಿಶೇಷ ಶಿಬಿರವನ್ನು ಏರ್ಪಡಿಸಿ ಮುನ್ನೆಚ್ಚರಿಕಾ ಲಸಿಕೆ ನೀಡಲಾಗುತ್ತದೆ ಎಂದು ವಿವರಿಸಿದರು.
ನೆರೆಯ ಕೇರಳ ರಾಜ್ಯದಲ್ಲಿ ಮಂಕಿಪಾಕ್ಸ್ ವೈರಾಣು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಮಂಕಿಪಾಕ್ಸ್ ವೈರಾಣು ಕೊಡಗು ಜಿಲ್ಲೆಯಲ್ಲಿ ಪತ್ತೆಯಾಗಿಲ್ಲ. ಇಂತಹ ಪ್ರಕರಣ ಗಳು ಕಂಡುಬAದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿ ಕಾಯ್ದಿರಿಸಲಾಗಿದೆ ಎಂದರು.
ಈ ವೈರಾಣು ತಡೆಯಲು ಪ್ರತ್ಯೇಕವಾಗಿರುವುದು ಅಗತ್ಯ.(ಗಾಯ, ಹುಣ್ಣುಗಳು ಗುಣವಾಗುವವರೆಗೆ). ಹುಣ್ಣುಗಳಿಗೆ ಪೂರಕ ಚಿಕಿತ್ಸೆಗಳು ನಿರಂತರ ಮೇಲ್ವಿಚಾರಣೆ ಮತ್ತು ವೈರಾಣು ಕಂಡುಬAದಲ್ಲಿ ತಕ್ಷಣವೇ ಚಿಕಿತ್ಸೆ ಪಡೆಯುವುದು ಅಗತ್ಯ ಎಂದರು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಇದ್ದರು.