ಮಡಿಕೇರಿ, ಜು.೨೬: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಜಾತಿಯ ಯುವಕ ಯುವತಿಯರಿಗೆ ೨೦೨೦-೨೧ ನೇ ಸಾಲಿನಲ್ಲಿ ಟೆಲಿವಿಷನ್ ಪತ್ರಿಕೋದ್ಯಮ, ವೀಡಿಯೋ, ಕ್ಯಾಮರಮನ್, ನಿರೂಪಣೆ, ವರದಿಗಾರಿಕೆ, ಕಾಫಿ ಎಡಿಟರ್, ಬುಲೆಟಿಂಗ್ ಪ್ರೊಡ್ಯೂಸರ್ ತರಬೇತಿ ನೀಡಲಾಗುವುದು.

ಜಿಲ್ಲಾ ಕಚೇರಿಯಿಂದ ಅರ್ಜಿ ಪಡೆದು ದಾಖಲೆಗಳೊಂದಿಗೆ ಜುಲೈ, ೩೦ ರೊಳಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ನಿಯಮಿತ, ರೇಸ್‌ಕೋರ್ಸ್ ರಸ್ತೆ, ಹೊಸಬಡಾವಣೆ ಮಡಿಕೇರಿ, ಕೊಡಗು ಜಿಲ್ಲೆ, ಇಲ್ಲಿಗೆ ದ್ವಿಪ್ರತಿಯಲ್ಲಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂ.ಸಂ.೦೮೨೭೨-೨೨೮೮೫೭ ನ್ನು ಸಂಪರ್ಕಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಚಂದ್ರಶೇಖರ್ ಅವರು ತಿಳಿಸಿದ್ದಾರೆ.