ವೀರಾಜಪೇಟೆ, ಜು. ೨೬: ಇಬ್ಬರು ಶಾಲಾ ವಿದ್ಯಾರ್ಥಿನಿಯರನ್ನು ಹಿಂಬಾಲಿಸುತ್ತಿದ್ದ ಪೊಲೀಸ್ ಪೇದೆಯೋರ್ವನನ್ನು ಗ್ರಾಮಸ್ಥರು ದಿಗ್ಭಂಧನಕ್ಕೆ ಒಳಪಡಿಸಿದ ಘಟನೆ ನಡೆದಿದೆ.
ವೀರಾಜಪೇಟೆ ಗ್ರಾಮಾಂತರ ಅಮ್ಮತ್ತಿ ಉಪಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಚಂದ್ರಶೇಖರ್ ಎಂಬ ಪೇದೆ ಅಮ್ಮತ್ತಿ ಒಂಟಿಯAಗಡಿಯ ಇಬ್ಬರು ಶಾಲಾ ವಿದ್ಯಾರ್ಥಿನಿಯರನ್ನು ಕಳೆದ ಮೂರು ದಿನಗಳಿಂದ ಹಿಂಬಾಲಿಸುತ್ತಿದ್ದ ಎನ್ನಲಾಗಿದೆ.
ಈ ಬಗ್ಗೆ ವಿದ್ಯಾರ್ಥಿನಿಯರು ಪೋಷಕರಿಗೆ ದೂರು ನೀಡಿದ್ದು, ಈ ಬಗ್ಗೆ ವಿಚಾರಿಸಿದಾಗ ಚಂದ್ರಶೇಖರ್ ದರ್ಪದಿಂದ ವರ್ತಿಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತನನ್ನು ಅಮ್ಮತ್ತಿ ರಿಕ್ರಿಯೇಷನ್ ಕ್ಲಬ್ನಲ್ಲಿ ದಿಗ್ಭಂಧನಕ್ಕೆ ಒಳಪಡಿಸಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ವೃತ್ತ ನಿರೀಕ್ಷಕ ಶಿವರುದ್ರಪ್ಪ ಅವರು ವಿದ್ಯಾರ್ಥಿನಿಯರ ಪೋಷಕರಿಂದ ದೂರು ಸ್ವೀಕರಿಸಿದ್ದು, ಚಂದ್ರಶೇಖರ್ ವಿರುದ್ಧ ದೂರು ದಾಖಲಿಸಿ ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಡಿವೈಎಸ್ಪಿ ನಿರಂಜನ್ ರಾಜೇ ಅರಸ್ ಸ್ಥಳಕ್ಕೆ ಭೇಟಿ ನೀಡಿದ್ದರು.ವೀರಾಜಪೇಟೆ, ಜು. ೨೬: ಇಬ್ಬರು ಶಾಲಾ ವಿದ್ಯಾರ್ಥಿನಿಯರನ್ನು ಹಿಂಬಾಲಿಸುತ್ತಿದ್ದ ಪೊಲೀಸ್ ಪೇದೆಯೋರ್ವನನ್ನು ಗ್ರಾಮಸ್ಥರು ದಿಗ್ಭಂಧನಕ್ಕೆ ಒಳಪಡಿಸಿದ ಘಟನೆ ನಡೆದಿದೆ.
ವೀರಾಜಪೇಟೆ ಗ್ರಾಮಾಂತರ ಅಮ್ಮತ್ತಿ ಉಪಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಚಂದ್ರಶೇಖರ್ ಎಂಬ ಪೇದೆ ಅಮ್ಮತ್ತಿ ಒಂಟಿಯAಗಡಿಯ ಇಬ್ಬರು ಶಾಲಾ ವಿದ್ಯಾರ್ಥಿನಿಯರನ್ನು ಕಳೆದ ಮೂರು ದಿನಗಳಿಂದ ಹಿಂಬಾಲಿಸುತ್ತಿದ್ದ ಎನ್ನಲಾಗಿದೆ.
ಈ ಬಗ್ಗೆ ವಿದ್ಯಾರ್ಥಿನಿಯರು ಪೋಷಕರಿಗೆ ದೂರು ನೀಡಿದ್ದು, ಈ ಬಗ್ಗೆ ವಿಚಾರಿಸಿದಾಗ ಚಂದ್ರಶೇಖರ್ ದರ್ಪದಿಂದ ವರ್ತಿಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತನನ್ನು ಅಮ್ಮತ್ತಿ ರಿಕ್ರಿಯೇಷನ್ ಕ್ಲಬ್ನಲ್ಲಿ ದಿಗ್ಭಂಧನಕ್ಕೆ ಒಳಪಡಿಸಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ವೃತ್ತ ನಿರೀಕ್ಷಕ ಶಿವರುದ್ರಪ್ಪ ಅವರು ವಿದ್ಯಾರ್ಥಿನಿಯರ ಪೋಷಕರಿಂದ ದೂರು ಸ್ವೀಕರಿಸಿದ್ದು, ಚಂದ್ರಶೇಖರ್ ವಿರುದ್ಧ ದೂರು ದಾಖಲಿಸಿ ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಡಿವೈಎಸ್ಪಿ ನಿರಂಜನ್ ರಾಜೇ ಅರಸ್ ಸ್ಥಳಕ್ಕೆ ಭೇಟಿ ನೀಡಿದ್ದರು.