ಮಡಿಕೇರಿ, ಜು. ೨೭ : ಕೊಡವ ಹೆರಿಟೇಜ್ ಕಟ್ಟಡ ನಿರ್ಮಾಣ ಸಂಬAಧ ಬಾಕಿ ಇರುವ ಕಾಮಗಾರಿ ಪೂರ್ಣಗೊಳಿಸಲು ಕೂಡಲೇ ವಿಸ್ತೃತ ಅಂದಾಜು ಪಟ್ಟಿ(ಡಿಟೈಲ್ ಪ್ರೋಜೆಕ್ಟ್ ರಿಪೋರ್ಟ್) ಸಲ್ಲಿಸುವಂತೆ ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಸೂಚಿಸಿದ್ದಾರೆ.
ವೀಡಿಯೊ ಸಂವಾದದ ಮೂಲಕ ಕೊಡವ ಹೆರಿಟೇಜ್ ಕಟ್ಟಡ ನಿರ್ಮಾಣ ಕಾಮಗಾರಿ ಸಂಬAಧಿಸಿದAತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರಿಂದ ಮಾಹಿತಿ ಪಡೆದು ಮಾತನಾಡಿದ ಅವರು, ಕೊಡವ ಹೆರಿಟೇಜ್ ಕಟ್ಟಡ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ಆ ನಿಟ್ಟಿನಲ್ಲಿ ಅಂದಾಜು ಪಟ್ಟಿ ಸಲ್ಲಿಸಬೇಕು. ಜಿಲ್ಲೆಯ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ಜೊತೆ ಮಾತನಾಡಿ ಹಣಕಾಸು ಇಲಾಖೆಯಿಂದ ಹಣ ಬಿಡುಗಡೆಗೆ ಕ್ರಮವಹಿಸಲಾಗುವುದು ಎಂದು ಹೇಳಿದರು.
ಈಗಾಗಲೇ ಶೇ.೭೫ ರಿಂದ ೮೦ ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಆ ನಿಟ್ಟಿನಲ್ಲಿ ಬಾಕಿ ಇರುವ ಕಾಮಗಾರಿ ಕೈಗೊಳ್ಳಲು ಮುಂದಾಗಬೇಕು ಎಂದು ಪ್ರಸಾದ್ ಹೇಳಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಕೊಡವ ಹೆರಿಟೇಜ್ ಕಟ್ಟಡದ ನಿರ್ಮಾಣ ಕಾಮಗಾರಿಯಲ್ಲಿ ಪ್ರಮುಖವಾಗಿ ಲ್ಯಾಟರೈಟ್ ಗೋಡೆಗಳಿಗೆ ಪಾಲಿಷಿಂಗ್ ಆಗಬೇಕಿದೆ. ಕಟ್ಟಡದ ಮುಂಭಾಗ ಗೇಟ್ ಮತ್ತು ಸುತ್ತುಗೋಡೆ ನಿರ್ಮಿಸಬೇಕಿದೆ. ಮೆಟ್ಟಿಲುಗಳಿಗೆ ರೇಲಿಂಗ್ಸ್ ಮತ್ತು ಪ್ಲೋರಿಂಗ್ ಮಾಡಬೇಕಿದೆ. ರಂಗಮAದಿರಕ್ಕೆ ಮೇಲ್ಛಾವಣಿ ಹಾಗೂ ಇತರ ಕೆಲಸಗಳು ಬಾಕಿ ಇದೆ.
ಕೊಡವ ಹೆರಿಟೇಜ್ ಸೆಂಟರ್ ನಿರ್ಮಾಣ ಸಂಬAಧ ೩೩೦.೪೫ ಲಕ್ಷ ರೂ.ಗಳ ಕಾಮಗಾರಿಗೆ ಅನುಮೋದನೆ ದೊರೆತಿದೆ. ಐನ್ಮನೆ, ಬಯಲು ರಂಗಮAದಿರ, ವಾಟರ್ ಟ್ಯಾಂಕ್, ತಡೆಗೋಡೆ ಮತ್ತು ಸಂಪರ್ಕ ಮೆಟ್ಟಿಲುಗಳು, ವಿದ್ಯುತ್ ಸಂಪರ್ಕ ಮತ್ತಿತರ ಕಾಮಗಾರಿಗಳು ಪೂರ್ಣಗೊಂಡಿದೆ.
(ಮೊದಲ ಪುಟದಿಂದ) ಈಗಾಗಲೇ ೨೮೨.೫೦ ಲಕ್ಷ ರೂ. ಬಿಡುಗಡೆಯಾಗಿದ್ದು, ೪೭.೯೫ ಲಕ್ಷ ರೂ. ಬಿಡುಗಡೆಗೆ ಬಾಕಿ ಇದೆ. ಕೊಡವ ಹೆರಿಟೇಜ್ ಕಾಮಗಾರಿ ಸಂಬAಧ ೧೦ ದಿನದಲ್ಲಿ ವಿಸ್ತೃತ ಅಂದಾಜು ಪಟ್ಟಿ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಹೇಳಿದರು.
ನಿವೃತ್ತ ಐಎಎಸ್ ಅಧಿಕಾರಿ ರತಿ ವಿನಯ್ ಜಾ ಅವರು ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಕೊಡವ ಪಾರಂಪರಿಕ ಕೇಂದ್ರ ನಿರ್ಮಾಣಕ್ಕೆ ಸಾಕಷ್ಟು ಶ್ರಮಿಸಲಾಗಿದೆ. ಆ ನಿಟ್ಟಿನಲ್ಲಿ ಕಾಮಗಾರಿ ಪೂರ್ಣಗೊಳಿಸಲು ಮುಂದಾಗ ಬೇಕು ಎಂದು ಕೋರಿದರು.
ಬಳಿಕ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಮಾತನಾಡಿ ಕೊಡವ ಪಾರಂಪರಿಕ ಕೇಂದ್ರವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸಲಹಾ ಸಮಿತಿ ಮತ್ತು ಕಾರ್ಯಕಾರಿ ಸಮಿತಿಯನ್ನು ನೇಮಿಸುವ ಸಂಬAಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸಮಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಅಧ್ಯಕ್ಷರಾಗಿ, ಜಿಲ್ಲೆಯ ಜನಪ್ರತಿನಿಧಿಗಳು ಕಾರ್ಯ ನಿರ್ವಹಿಸಲಿದ್ದಾರೆ ಎಂದು ಹೇಳಿದರು.
ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಯತೀಶ್ ಉಳ್ಳಾಲ್, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ಗಳಾದ ಚೆನ್ನಕೇಶವ, ಸತೀಶ್, ಇತರರು ಇದ್ದರು.