ಸಿದ್ದಾಪುರ, ಆ. ೫ : ಅಮ್ಮತ್ತಿಯ ಶ್ರೀ ಚೌಡೇಶ್ವರಿ ಗಣಪತಿ ಸೇವಾ ಸಮಿತಿ ವತಿಯಿಂದ ಆಚರಿಸಿಕೊಂಡು ಬರುತ್ತಿರುವ ಗೌರಿ ಗಣೇಶೋತ್ಸವ ಆಚರಣೆ ಸಂಬAಧ ೩೨ನೇ ವರ್ಷದ ಗೌರಿ ಗಣೇಶೋತ್ಸವದ ಪೂರ್ವಭಾವಿ ಸಭೆಯು ಸಮಿತಿ ಗೌರವಾಧ್ಯಕ್ಷ ಐ.ಕೆ. ಪೂಣಚ್ಚ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಳೆದ ೨ ವರ್ಷಗಳಿಂದ ಕೊರೊನಾ ಕಾರಣದಿಂದ ಸರಳ ಆಚರಣೆ ಮಾಡಿದ್ದು, ಈ ಬಾರಿ ಅದ್ದೂರಿಯ ಗೌರಿ ಗಣೇಶೋತ್ಸವ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯಲ್ಲಿ ಸಮಿತಿಯ ಅಧ್ಯಕ್ಷ ಸತೀಶ್ ವಿ.ಆರ್., ಕಾರ್ಯದರ್ಶಿ ಗೌತಮ್ ಸೇರಿದಂತೆ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.