ಕೂಡಿಗೆ, ಆ. ೫: ಇಲ್ಲಿನ ಕ್ರೀಡಾ ಶಾಲೆಗೆ ಭೇಟಿ ನೀಡಿ ಶಾಲೆಗೆ ಒಂದು ಕೋಟಿ ಹಣ ಬಿಡುಗಡೆಯಾದ ಹಿನ್ನೆಲೆಯಲ್ಲಿ ಮತ್ತು ರಾಜ್ಯ ಸರ್ಕಾರದ ವತಿಯಿಂದ ಕೂಡಿಗೆ ಕ್ರೀಡಾ ಶಾಲೆಯ ಅವರಣದಲ್ಲಿ ಪದವಿ ತರಗತಿಯ ವಿದ್ಯಾರ್ಥಿಗಳಿಗೆ ವಸತಿ ನಿಲಯ ನಿರ್ಮಾಣದ ಜಾಗವನ್ನು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಕಳೆದ ೬ ತಿಂಗಳ ಹಿಂದೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರು ಕೂಡಿಗೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಪದವಿ ಪೂರ್ವ ತರಗತಿಯನ್ನು ಮುಗಿಸಿದ ಬಳಿಕ ವಿದ್ಯಾರ್ಥಿಗಳಿಗೆ ಪದವಿ ತರಗತಿಗಳಿಗೆ ತೆರಳಲು ವಸತಿ ನಿಲಯ ವ್ಯವಸ್ಥೆ ಇಲ್ಲದ ಬಗ್ಗೆ ಪೋಷಕರು, ವಿದ್ಯಾರ್ಥಿಗಳು ಗಮನ ಸೆಳೆದರು.

ಈ ಸಂದರ್ಭದಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಇಂದಿರಾ ರಮೇಶ್ ಮಾಜಿ ತಾ.ಪಂ.ಸದಸ್ಯ ಗಣೇಶ್, ಕುಮಾರಸ್ವಾಮಿ, ಜಿಲ್ಲಾ ಬಿಜೆಪಿ ಎಸ್‌ಟಿ ಘಟಕದ ಕಾರ್ಯದರ್ಶಿ ಪ್ರಭಾಕರ , ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಸ್ವಾಮಿ, ಸೇರಿದಂತೆ ಕ್ರೀಡಾ ಶಾಲೆಯ ತರಬೇತುದಾರರು ಹಾಜರಿದ್ದರು.