ಮಡಿಕೇರಿ, ಆ. ೬ : ಮಳೆಯಿಂದ ಹಾನಿಯಾದ ಮನೆ ಹಾಗೂ ಇತರೆ ಸಂಬAಧ ತಕ್ಷಣವೇ ಪರಿಹಾರ ವಿತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಮಳೆ ಹಾನಿ ಸಂಬAಧ ವೀಡಿಯೋ ಸಂವಾದ ಮೂಲಕ ಜಿಲ್ಲಾಧಿಕಾರಿ ಅವರಿಂದ ಮಾಹಿತಿ ಪಡೆದು ಮಾತನಾಡಿದ ಮುಖ್ಯಮಂತ್ರಿ ಅವರು, ಕಾಳಜಿ ಕೇಂದ್ರದಲ್ಲಿ ಮೆನು ಪ್ರಕಾರ ಆಹಾರ ಪೂರೈಸಬೇಕು. ಸಂತ್ರಸ್ತರು ಕಾಳಜಿ ಕೇಂದ್ರಕ್ಕೆ ಬರದೆ ಸಂಬAಧಿಕರ ಮನೆಗೆ ಹೋದಲ್ಲಿ ಅವರಿಗೆ ಆಹಾರ ಕಿಟ್ ನೀಡಬೇಕು ಎಂದು ನಿರ್ದೇಶನ ನೀಡಿದರು.

(ಮೊದಲ ಪುಟದಿಂದ) ಮಳೆಯಿಂದ ಹಾನಿಯಾದ ರಸ್ತೆ, ಸೇತುವೆ ದುರಸ್ತಿಗೆ ಮುಂದಾಗಬೇಕು. ಸಾರಿಗೆ ಮತ್ತು ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗದAತೆ ಗಮನ ಹರಿಸಬೇಕು.

ಭೂಕುಸಿತ ಹೆಚ್ಚಿರುವ ಪ್ರದೇಶದಲ್ಲಿ ಜನರ ಮನವೊಲಿಸಿ ಸ್ಥಳಾಂತರಿಸ ಬೇಕು. ಹೆಚ್ಚಿನ ಮಳೆಯಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಲ್ಲಿ ಕೂಡಲೆ ವಿದ್ಯುತ್ ಲೈನ್, ಟ್ರಾನ್ಸ್ಫಾರ್ಮರ್ ಪುನರ್ ಸ್ಥಾಪಿಸಬೇಕು ಎಂದು ಹೇಳಿದರು. ಪರಿಹಾರ ಕಲ್ಪಿಸಲು ಹಣದ ಕೊರತೆ ಇಲ್ಲ, ಮಳೆ ಹಾನಿ ಸಂಬAಧ ಅಯಾಯ ಸಂದರ್ಭದಲ್ಲಿ ಪರಿಹಾರ ವಿತರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಮಾಹಿತಿ ನೀಡಿ ಮನೆ ಹಾನಿಗೆ ತಕ್ಷಣವೇ ಪರಿಹಾರ ವಿತರಿಸ ಲಾಗುತ್ತಿದೆ. ಭಾಗಮಂಡಲ - ಕರಿಕೆ ರಸ್ತೆ ಮಾರ್ಗದಲ್ಲಿ ಅಲ್ಲಲ್ಲಿ ಬರೆ ಕುಸಿತ ಉಂಟಾಗಿದ್ದು, ತೆರವುಗೊಳಿಲಾಗಿದೆ. ಹಾಗೆಯೇ ಜಿಲ್ಲೆಯ ಕೆಲವು ಕಡೆ ರಸ್ತೆ ಮತ್ತು ಸೇತುವೆ ಹಾನಿ ಆಗಿದ್ದು ಸರಿಪಡಿಸುವ ಕಾರ್ಯ ನಡೆದಿದೆ. ತೊಂದರೆಗೆ ಒಳಗಾದ ಕುಟುಂಬ ದವರಿಗೆ ಆಹಾರ ಕಿಟ್ ಒದಗಿಸಲಾಗಿದೆ ಎಂದರು. ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಯ್ಯಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.