ಮಡಿಕೇರಿ, ಆ. ೮: ಮಹಾಮಳೆಗೆ ತತ್ತರಿಸಿ ಅಪಾರ ಪ್ರಮಾಣದ ಬೆಳೆ ಹಾನಿಗೊಳಗಾಗಿರುವ ಜಿಲ್ಲೆಯ ರೈತರಿಗೆ ರಾಜ್ಯ ಸರಕಾರ ಕೂಡಲೇ ಬೆಳೆ ಪರಿಹಾರ ಬಿಡುಗಡೆ ಮಾಡುವಂತೆ ಸಹಕಾರ ಭಾರತಿ ರಾಜ್ಯ ಉಪಾಧ್ಯಕ್ಷ ರವಿ ಬಸಪ್ಪ ಅವರು ಆಗ್ರಹಿಸಿದ್ದಾರೆ.

ಹೇಳಿಕೆ ನೀಡಿರುವ ಅವರು ಈ ಬಾರಿಯ ಮಹಾಮಳೆಗೆ ಜಿಲ್ಲೆಯ ರೈತರು ತತ್ತರಿಸಿ ಹೋಗಿದ್ದಾರೆ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ ಉಂಟಾಗಿದ್ದು ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರಕಾರ ಜಿಲ್ಲೆಯ ಜನರೊಂದಿಗೆ ಇರಬೇಕೆಂದು ಒತ್ತಾಯಿಸಿದರು. ಜಿಲ್ಲೆಯ ಜಿಲ್ಲಾಧಿಕಾರಿಯವರ ಖಾತೆಯಲ್ಲಿ ರಾಷ್ಟಿçÃಯ ವಿಪತ್ತು ಹಣ ಇರುವುದು ಸರಿಯಾದರೂ ಇಂತಹ ಪರಿಸ್ಥಿತಿಯಲ್ಲಿ ಬೆಳೆ ಹಾನಿಗೆ ಒಳಗಾದ ರೈತರಿಗೆ ಹಣ ಬಿಡುಗಡೆ ಮಾಡಲು ತಡ ಮಾಡುತ್ತಿರುವುದು ಸರಿಯಲ್ಲ ರಾಜ್ಯ ಸರಕಾರ ಇನ್ನು ಹೆಚ್ಚಿನ ಆಸಕ್ತಿ ವಹಿಸಿ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.