ಅರಣ್ಯ ಇಲಾಖೆ ಎಚ್ಚೆತ್ತುಕೊಳ್ಳುವಂತೆ ಎಸ್.ಡಿ.ಪಿ.ಐ ಆಗ್ರಹ
ಮಡಿಕೇರಿ, ಆ.೧೭: ಜಿಲ್ಲೆಯಲ್ಲಿ ಆನೆ ಮಾನವ ಸಂಘರ್ಷ ನಿರಂತರವಾಗಿ ನಡೆಯುತ್ತಿದ್ದು, ಇದೀಗ ಜಿಲ್ಲೆಯ ವಿವಿಧೆಡೆಯ ಶಾಲೆಗಳ ಪಕ್ಕದಲ್ಲೇ ಕಾಡಾನೆಗಳು ಓಡಾಡುತ್ತಿರುವುದರಿಂದ ಪೋಷಕರು ಮತ್ತು ಮಕ್ಕಳು ಆತಂಕದಲ್ಲಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಎಚ್ಚೆತ್ತುಕೊಳ್ಳಬೇಕೆಂದು ಎಸ್.ಡಿ.ಪಿ.ಐ ಪಕ್ಷದ ಜಿಲ್ಲಾಧ್ಯಕ್ಷ ಕಲೀಲ್ ಆಗ್ರಹಿಸಿದ್ದಾರೆ.
ಕುಶಾಲನಗರ ತಾಲೂಕಿನ ನೆಲ್ಯಹುದಿಕೇರಿ ಸರಕಾರಿ ಶಾಲೆಯ ಸಮೀಪದಲ್ಲಿ ಹಾಗೂ ವೀರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು ಸರಕಾರಿ ಶಾಲೆಯ ಪಕ್ಕದಲ್ಲೇ ಕಾಡಾನೆಗಳ ಓಡಾಟ ಹೆಚ್ಚಾಗಿದೆ. ಅನಾಹುತ ಸಂಭವಿಸುವುದಕ್ಕಿAತ ಮುಂಚಿತವಾಗಿ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯ ಮಾಡಬೇಕಾಗಿದೆ. ಶಾಲೆಗಳ ಸಮೀಪದಲ್ಲಿ ಆರ್.ಆರ್.ಟಿ. ತಂಡವನ್ನು ನಿಯೋಜಿಸಬೇಕೆಂದು ಕಲೀಲ್ ಆಗ್ರಹಿಸಿದ್ದಾರೆ.