ಬೆಂಗಳೂರು, ಆ. ೨೩: ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ತಮ್ಮ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ಖಂಡಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಮಡಿಕೇರಿ ಚಲೋ ಪ್ರತಿಭಟನಾ ರ‍್ಯಾಲಿಯನ್ನು ಮುಂದೂಡಲಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ಬೆಂಗಳೂರಿನ ತಮ್ಮ ಅಧಿಕೃತ ನಿವಾಸದಲ್ಲಿ ಕರೆದ ತುರ್ತು ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ಪ್ರಕಟಿಸಿದ್ದಾರೆ. ಬುಧವಾರದಿಂದÀ ನಾಲ್ಕು ದಿನ ಕೊಡಗು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ನಾವು ಕಾಂಗ್ರೆಸ್ ನಾಯಕರೆಲ್ಲಾ ಸೇರಿ ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಆದೇಶ ಎಂದರೆ ಅದು ಸರ್ಕಾರದ ಆದೇಶ. ಜವಾಬ್ದಾರಿಯುತ ಪ್ರತಿಪಕ್ಷವಾಗಿ ನಾವು ಸರ್ಕಾರದ ಆದೇಶವನ್ನು ಪರಿಪಾಲಿಸುತ್ತೇವೆ. ಕೊಡಗು ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಮುಂದೂಡಲು ನಿರ್ಧರಿಸಿದ್ದೇವೆ, ಇದು ನನ್ನೊಬ್ಬನ ನಿರ್ಧಾರವಲ್ಲ, ಎಲ್ಲಾ ಕಾಂಗ್ರೆಸ್ ನಾಯಕರ ತೀರ್ಮಾನ ಎಂದು ಸಿದ್ದರಾಮಯ್ಯ ನುಡಿದರು.

ಮುಂದೆ ಎಲ್ಲ ಕಾಂಗ್ರೆಸ್ ನಾಯಕರು, ಸ್ನೇಹಿತರೊಂದಿಗೆ ಚರ್ಚಿಸಿ ಮಡಿಕೇರಿ ಚಲೋ ಮಾಡುವ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು.

ಇದು ಆಡಳಿತ ಪಕ್ಷ ಬಿಜೆಪಿಯ ಷಡ್ಯಂತ್ರವಾಗಿದೆ. ಆಡಳಿತ ಪಕ್ಷದ ಷಡ್ಯಂತ್ರದೊAದಿಗೆ ಪೊಲೀಸರು ಶಾಮೀಲಾಗಿದ್ದಾರೆ. ಕೊಡಗು ಜಿಲ್ಲೆಯ ಭೇಟಿ ವೇಳೆ ತಮ್ಮ ವಿರುದ್ಧ ನಡೆದ ಪ್ರತಿಭಟನೆಯ ಪ್ರತಿ ಹಂತದಲ್ಲಿಯೂ ಪೊಲೀಸರ ನಿಷ್ಕಿçÃಯತೆ ಎದ್ದು ಕಾಣುತ್ತಿತ್ತು ಎಂದು ಆರೋಪಿಸಿದ್ದಾರೆ.

ನಾನು ಮಡಿಕೇರಿ ಚಲೋ ಘೋಷಣೆ ಮಾಡಿದ ಬಳಿಕ ಅದರ ಮಾರನೇ ದಿನ ಬಿಜೆಪಿ ಅವರು ಘೋಷಣೆ ಜನ ಜಾಗೃತಿ ಸಮಾವೇಶ ಮಾಡಿದ್ರು. ನಮ್ಮ ಮೇಲೆ ಕುಟಿಲ ಪ್ರಯತ್ನ ಮಾಡಿ ಷಡ್ಯಂತ್ರ ಮಾಡಿದ್ದಾರೆ ಎಂದು ಟೀಕಿಸಿದರು.

(ಮೊದಲ ಪುಟದಿಂದ) ಮೊನ್ನೆ ಆಗಸ್ಟ್ ೧೮ರಂದು ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆದ ಹಾನಿಯನ್ನು ವೀಕ್ಷಿಸಲು ತೆರಳಿದ್ದೆ. ಹಲವೆಡೆ ಮಳೆ ಹೆಚ್ಚಾಗಿ ಬಿದ್ದು ಹಾನಿಯಾಗಿದೆ. ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಎರಡು-ಮೂರು ಪಟ್ಟು ಹೆಚ್ಚು ಮಳೆ ಬಿದ್ದಿದೆ. ಇಡೀ ಕೊಡಗು ಜಿಲ್ಲೆಯಲ್ಲಿ ಮಣ್ಣು ಕುಸಿದಿದೆ. ಜನರು ವಾಸ ಮಾಡುತ್ತಿದ್ದ ಮನೆಗಳಿಗೆ ಹಾನಿಯಾಗಿದೆ. ಇನ್ನು ಕೆಲವು ಕಡೆ ರಸ್ತೆಯ ಮೇಲೆ ಮಣ್ಣು ಬಿದ್ದು ಮುಚ್ಚಿ ಹೋಗಿ ಸಾರಿಗೆಗೆ ಬಹಳ ತೊಂದರೆ ಆಗಿದೆ, ಈ ಮಧ್ಯೆ ಕೊಡಗಿನ ಜನರು ಪ್ರವಾಹ, ಭೂಕಂಪದAತಹ ಪ್ರಕೃತಿ ವಿಕೋಪ ಆತಂಕ ಎದುರಿಸುತ್ತಿದ್ದಾರೆ ಎಂದರು.