ಗುಲಾಂ ನಬಿ ಆಜಾದ್ ಹೊಸ ರಾಜಕೀಯ ಪ್ರಯಾಣ

ಶ್ರೀನಗರ, ಸೆ. ೪: ನಾಲ್ಕು ದಶಕಗಳಿಗೂ ಹೆಚ್ಚಿನ ಕಾಲದ ಒಡನಾಟ ಹೊಂದಿದ್ದ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಒಂದು ವಾರದ ನಂತರ ಗುಲಾಂ ನಬಿ ಆಜಾದ್ ಇಂದು ಹೊಸ ರಾಜಕೀಯ ಪ್ರಯಾಣವನ್ನು ಆರಂಭಿಸಿದ್ದಾರೆ. ಜಮ್ಮುವಿನಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ತಮ್ಮ ಹೊಸ ಪಕ್ಷದ ಹೆಸರು ಮತ್ತು ಧ್ವಜವನ್ನು ಜನರೇ ನಿರ್ಧರಿಸುತ್ತಾರೆ ಎಂದರು. ಜಮ್ಮುವಿನ ಸೈನಿಕ್ ಮೈದಾನದಲ್ಲಿ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಗುಲಾಂ ನಬಿ ಆಜಾದ್ ಅವರು ಜಮ್ಮು ಮತ್ತು ಕಾಶ್ಮೀರದ ಜನರೊಂದಿಗಿದ್ದೇನೆ ಎಂದು ಹೇಳಿದರು. ನಾನು ಇನ್ನೂ ನನ್ನ ಪಕ್ಷಕ್ಕೆ ಹೆಸರನ್ನು ನಿರ್ಧರಿಸಿಲ್ಲ. ಜಮ್ಮು ಮತ್ತು ಕಾಶ್ಮೀರದ ಜನರು ಪಕ್ಷದ ಹೆಸರು ಮತ್ತು ಧ್ವಜವನ್ನು ನಿರ್ಧರಿಸುತ್ತಾರೆ. ನಾನು ನನ್ನ ಪಕ್ಷಕ್ಕೆ ಹಿಂದೂಸ್ತಾನಿ ಹೆಸರನ್ನು ನೀಡುತ್ತೇನೆ, ಅದು ಎಲ್ಲರಿಗೂ ಅರ್ಥವಾಗುತ್ತದೆ ಎಂದು ಅವರು ಸಭೆಯಲ್ಲಿ ಹೇಳಿದರು.

ಮಕ್ಕಳಿಗೆ ವಿಷ ನೀಡಿ ತಾಯಿ ಆತ್ಮಹತ್ಯೆಗೆ ಶರಣು

ರಾಮನಗರ, ಸೆ. ೪: ತನ್ನ ಇಬ್ಬರು ಪುಟ್ಟ ಮಕ್ಕಳಿಗೆ ವಿಷ ನೀಡಿದ ಮಹಿಳೆಯೊಬ್ಬರು ಬಳಿಕ ತಾನೂ ಕೂಡಾ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಗಡಿ ಸಮೀಪದ ಹೊಸಪಾಳ್ಯ ಗ್ರಾಮದಲ್ಲಿ ನಡೆದಿದೆ. ಮಾಗಡಿ ತಾಲೂಕು ರೈತ ಸಂಘದ ಅಧ್ಯಕ್ಷ ಲೋಕೇಶ್ ಅವರ ಪತ್ನಿ ರೂಪಾ (೩೨) ಮತ್ತು ಅವರ ಮಕ್ಕಳಾದ ಸ್ಪೂರ್ತಿ(೬) ಹರ್ಷಿತಾ (೪) ಮೃತಪಟ್ಟ ದುರ್ದೈವಿಗಳು. ರೂಪಾ ತನ್ನ ಜಮೀನಿನಲ್ಲಿ ಇಬ್ಬರು ಮಕ್ಕಳಾದ ಸ್ಪೂರ್ತಿ ಹಾಗೂ ಹರ್ಷಿತಾ ಅವರಿಗೆ ವಿಷ ನೀಡಿದ್ದಾರೆ. ಬಳಿಕ ತಾನೂ ಕೂಡಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬAಧ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವಿದ್ಯಾರ್ಥಿಗೆ ಪಾನೀಯದಲ್ಲಿ ವಿಷ ಹಾಕಿ ಕೊಲೆ

ಕಾರೈಕಲ್, ಸೆ. ೪: ೧೩ ವರ್ಷದ ಬಾಲಕನನ್ನು ಸಹಪಾಠಿಯ ತಾಯಿಯೇ ಕೊಲೆ ಮಾಡಿರುವ ಘಟನೆ ಕಾರೈಕಲ್‌ನಲ್ಲಿ ನಡೆದಿದೆ. ವಿದ್ಯಾರ್ಥಿ ಶಾಲೆಯಲ್ಲಿ ತನ್ನ ಮಗಳನ್ನು ಮೀರಿಸುವುದನ್ನು ಬಯಸದ ಕಾರಣ ಮಹಿಳೆ ಪಾನೀಯದಲ್ಲಿ ವಿಷ ಹಾಕಿ ಕುಡಿಸಿದ್ದಾಳೆ. ಇದರಿಂದ ತೀವ್ರ ಅಸ್ವತ್ಥಗೊಂಡಿದ್ದ ಬಾಲಕ ಶನಿವಾರ ರಾತ್ರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಆರೋಪಿಯನ್ನು ೪೨ ವರ್ಷದ ಜೆ ಸಹಾಯರಾಣಿ ವಿಕ್ಟೋರಿಯಾ ಎಂದು ಗುರುತಿಸಲಾಗಿದೆ. ಮಹಿಳೆ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಮೃತ ವಿದ್ಯಾರ್ಥಿ ಕಾರೈಕಲ್‌ನ ಖಾಸಗಿ ಶಾಲೆಯಲ್ಲಿ ೮ನೇ ತರಗತಿಯಲ್ಲಿ ಓದುತ್ತಿದ್ದು ತರಗತಿಯ ಟಾಪರ್ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದನು ಎಂದು ವರದಿಯಾಗಿದೆ. ಇನ್ನು ಆರೋಪಿ ಸಹಾಯರಾಣಿ ವಿಕ್ಟೋರಿಯಾ ಅವರ ಮಗಳು ಅದೇ ತರಗತಿಯಲ್ಲಿ ಓದುತ್ತಿದ್ದು ತನ್ನ ಮಗಳಿಗಿಂತ ಉತ್ತಮವಾಗಿ ಓದುತ್ತಿದ್ದ ಹುಡುಗನ ಬಗ್ಗೆ ಆಕೆ ಅಸಮಾಧಾನ ಹೊಂದಿದ್ದಳು. ಶುಕ್ರವಾರ ಶಾಲೆಯಲ್ಲಿ ವಾರ್ಷಿಕ ದಿನ ಆಚರಿಸಲಾಗಿತ್ತು. ಆಚರಣೆಯ ಅಂಗವಾಗಿ ಬಾಲಕ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡಲು ಮುಂದಾಗಿದ್ದನು. ಬೆಳಗ್ಗೆ ಶಾಲೆಗೆ ಭೇಟಿ ನೀಡಿದ ಆರೋಪಿ ಮಹಿಳೆ, ಶಾಲೆಯ ಕಾವಲುಗಾರನಿಗೆ ತಾನು ಬಾಲಕನ ತಾಯಿ ಎಂದು ಸುಳ್ಳು ಹೇಳಿ ತನ್ನ ಮಗನಿಗೆ ತಂಪು ಪಾನೀಯವನ್ನು ನೀಡುವಂತೆ ಎರಡು ಬಾಟಲಿಗಳನ್ನು ಕೊಟ್ಟು ಹೋಗಿದ್ದಳು. ಇದನ್ನು ಸೇವಿಸಿದ ನಂತರ ಬಾಲಕ ಅಸ್ವಸ್ಥಗೊಂಡಿದ್ದಾನೆ. ನಂತರ ಮನೆಗೆ ತಲುಪಿದ ಮೇಲೆ ಬಾಟಲಿಯನ್ನು ಎಸೆದಿದ್ದಾನೆ. ಇದರಿಂದ ಆತಂಕಗೊAಡ ಪೋಷಕರು ಮಗನನ್ನು ಕಾರೈಕಲ್ ಜನರಲ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದನು. ಇದಕ್ಕೂ ಮುನ್ನ ಬಾಲಕ ತನ್ನ ಪೋಷಕರಿಗೆ ನಡೆದಿದ್ದನ್ನು ತಿಳಿಸಿದ್ದಾನೆ. ಪೋಷಕರು ಶಾಲೆಯ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರೀಕ್ಷಿಸಿದಾಗ ಮಹಿಳೆಯನ್ನು ಸಹಾಯರಾಣಿ ವಿಕ್ಟೋರಿಯಾ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಕಾರೈಕಲ್‌ನ ಹಿರಿಯ ಪೊಲೀಸ್ ಅಧೀಕ್ಷಕ ಆರ್ ಲೋಕೇಶ್ವರನ್ ಪ್ರಕಾರ, ಆರೋಪಿಯು ಮೆಡಿಕಲ್‌ನಿಂದ ವಿರೇಚಕ ಮಾತ್ರೆಗಳನ್ನು ಖರೀದಿಸಿ, ತಂಪು ಪಾನೀಯದಲ್ಲಿ ಬೆರೆಸಿ ಶಾಲೆಯ ವಾಚ್‌ಮನ್ ಮೂಲಕ ಹುಡುಗನಿಗೆ ನೀಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ಶಾಲೆಯ ವಾರ್ಷಿಕ ದಿನದ ಕಾರ್ಯಕ್ರಮಗಳಲ್ಲಿ ಹುಡುಗ ಭಾಗವಹಿಸದಂತೆ ತಡೆಯಲು ಆರೋಪಿ ಮಹಿಳೆ ಬಯಸಿದ್ದಳು. ಆಕೆ ಬಾಲಕನಿಗೆ ನೀಡಿದ ಪಾನೀಯದಲ್ಲಿ ನಿಖರವಾಗಿ ಏನನ್ನು ಸೇರಿಸಲಾಗಿದೆ ಎಂಬುದನ್ನು ಕಂಡುಹಿಡಿಯಲು ನಾವು ಶವಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ ಎಂದರು.

ಉಗ್ರನ ವಿಚಾರಣೆಗೆ ಅವಕಾಶ ನೀಡಲು ಭಾರತ ಮನವಿ

ನವದೆಹಲಿ, ಸೆ. ೪: ಭಾರತದ ಪ್ರಮುಖ ನಾಯಕರ ಹತ್ಯೆಗೆ ಸಂಚು ರೂಪಿಸಿದ್ದ ಇಸ್ಲಾಮಿಕ್ ಸ್ಟೇಟ್ ಆತ್ಮಾಹುತಿ ದಾಳಿಕೋರನನ್ನು ರಷ್ಯಾ ಭದ್ರತಾ ಪಡೆಗಳು ಬಂಧಿಸಿದ್ದವು. ಇದೀಗ ಆತನ ವಿಚಾರಣೆಗೆ ಅವಕಾಶ ನೀಡುವಂತೆ ಭಾರತ ರಷ್ಯಾವನ್ನು ಕೇಳಿದೆ. ಇದರ ಜೊತೆಗೆ ಭಾರತದ ತನಿಖಾ ಸಂಸ್ಥೆಗಳು ಉಗ್ರನಿಂದ ಪಡೆಯಲು ಇಚ್ಛಿಸಿರುವ ಮಾಹಿತಿಯ ಬಗ್ಗೆ ಪ್ರಶ್ನೆಗಳನ್ನು ಕಳಿಸಿಕೊಟ್ಟಿವೆ. ಆಗಸ್ಟ್ ೨೨ರಂದು ರಷ್ಯಾ ಭದ್ರತಾ ಪಡೆಗಳು ಉಜ್ಬೆಕ್ ಇಸ್ಲಾಮಿಕ್ ಸ್ಟೇಟ್ ಸಂಘಟನೆಗೆ ಸೇರಿದ ಅಝಮೊವ್ ಎಂಬಾತನನ್ನು ಬಂಧಿಸಿತ್ತು. ಇನ್ನು ಈತನ ಜೊತೆಗೆ ಬಂದಿದ್ದ ಕಿರ್ಗಿಸ್ತಾನದ ಪ್ರಜೆಯನ್ನು ಟರ್ಕಿಯಲ್ಲಿ ಹತ್ಯೆ ಮಾಡಲಾಗಿತ್ತು. ಆತ ಭಾರತದ ಮೇಲಿನ ದಾಳಿಗೆ ಹಿಂದೇಟು ಹಾಕಿದ್ದಕ್ಕೆ ಆತನನ್ನು ಕೊಲೆ ಮಾಡಲಾಗಿದೆ ಎಂದು ರಷ್ಯಾದ ಕೇಂದ್ರಿಯ ತನಿಖಾ ಸೇವೆಯ ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತೆ ವಿಚಾರವಾಗಿ ಭಾರತದ ತನಿಖೆ ಸಂಸ್ಥೆಗಳು ಆರಂಭದಿAದಲೂ ರಷ್ಯಾ ಮತ್ತು ಉಜ್ಬೆಕಿಸ್ತಾನ್ ತನಿಖಾ ಸಂಸ್ಥೆಗಳ ಜೊತೆ ಸಂಪರ್ಕದಲ್ಲಿತ್ತು. ಇದೀಗ ಭಾರತದ ಮೇಲೆ ದಾಳಿ ನಡೆಸುವ ಸಂಚು ಬಯಲಾಗಿರುವುದರಿಂದ ಉಗ್ರ ಅಝಮೊವ್‌ನ ನೇರ ವಿಚಾರಣೆಗೆ ಅವಕಾಶ ಕೋರಿವೆ. ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ಹತ್ಯೆಯ ಜವಾಬ್ದಾರಿಯನ್ನು ಅಝಮೊವ್‌ಗೆ ನೀಡಲಾಗಿತ್ತು.

ಭಾರತದ ನೆರವು ಶ್ಲಾಘಿಸಿದ ಬಾಂಗ್ಲಾದೇಶದ ಪ್ರಧಾನಿ

ಢಾಕಾ, ಸೆ. ೪: ರಷ್ಯಾ-ಉಕ್ರೇನ್ ಸಂಘರ್ಷದ ವೇಳೆ ಮತ್ತು ಕೋವಿಡ್ ಸಂಕಷ್ಟದ ಕಾಲದಲ್ಲಿ ನೆರವಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕ್ರಮವನ್ನು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಶ್ಲಾಘಿಸಿದ್ದಾರೆ. ಕೊರೋನಾ ಸಾಂಕ್ರಾಮಿಕ ರೋಗ ವೇಗವಾಗಿ ಹರಡುತ್ತಿರುವಾಗ ಲಸಿಕೆ ಅಭಿಯಾನದಡಿ ನೆರೆಯ ದೇಶಗಳಿಗೆ ಕೋವಿಡ್-೧೯ ಲಸಿಕೆ ಒದಗಿಸಿದ ನರೇಂದ್ರ ಮೋದಿ ಸರ್ಕಾರದ ನಡೆಯನ್ನೂ ಶ್ಲಾಘಿಸಿದ್ದಾರೆ. ಉಭಯ ದೇಶಗಳ ನಡುವೆ ಭಿನ್ನಾಭಿಪ್ರಾಯಗಳಿರಬಹುದು, ಆದರೆ, ಇವುಗಳನ್ನು ಸಂವಾದದ ಮೂಲಕ ಪರಿಹರಿಸಿಕೊಳ್ಳಬೇಕು. ಭಾರತ ಮತ್ತು ಬಾಂಗ್ಲಾದೇಶಗಳು ಹಲವಾರು ಕ್ಷೇತ್ರಗಳಲ್ಲಿ ಅದನ್ನು ನಿಖರವಾಗಿ ಮಾಡಿದೆ ಎಂದು ಅವರು ಹೇಳಿದರು. ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಸಮಯದಲ್ಲಿ ನಮ್ಮ ಅನೇಕ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದರು. ಈ ವೇಳೆ ಭಾರತವು ತನ್ನ ದೇಶ ವಿದ್ಯಾರ್ಥಿಗಳನ್ನು ಉಕ್ರೇನ್‌ನಿಂದ ಸ್ಥಳಾಂತರಿಸಿದಾಗ ನಮ್ಮ ದೇಶದ ವಿದ್ಯಾರ್ಥಿಗಳನ್ನು ಕರೆತಂದರು ಎಂದು ಪ್ರಧಾನಿ ಹಸೀನಾ ಸ್ಮರಿಸಿದರು.

ಅಪಘಾತದಲ್ಲಿ ಉದ್ಯಮಿ ಸಾವು

ಮುಂಬೈ, ಸೆ. ೪: ಟಾಟಾ ಸನ್ಸ್ನ ಮಾಜಿ ಅಧ್ಯಕ್ಷ, ಉದ್ಯಮಿ ಸೈರಸ್ ಮಿಸ್ತಿç (೫೪) ಅವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಹಮದಾಬಾದ್‌ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಭಾನುವಾರ ಮಹಾರಾಷ್ಟçದ ಪಾಲ್ಘರ್‌ನಲ್ಲಿ ಸೂರ್ಯ ನದಿಯ ಸೇತುವೆಯ ಮೇಲೆ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರು ಚಾಲಕ ಸೇರಿದಂತೆ ಅವರೊಂದಿಗೆ ಪ್ರಯಾಣಿಸುತ್ತಿದ್ದ ಇನ್ನಿಬ್ಬರು ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನು ಗುಜರಾತ್‌ನ ಆಸ್ಪತ್ರೆಗೆ ರವಾನಿಸಲಾಗಿದೆ. ರತನ್ ಟಾಟಾ ಅವರ ನಂತರ ಸಂಘಟಿತ ಅಧ್ಯಕ್ಷರಾಗಿ ಆಯ್ಕೆಯಾದ ಸೈರಸ್ ಮಿಸ್ತಿç ಅವರನ್ನು ಭಾರತದ ಅತ್ಯಂತ ಉನ್ನತ ಮಟ್ಟದ ಸಂಸ್ಥೆ ಟಾಟಾ ಸನ್ಸ್ನಿಂದ ೨೦೧೬ ರಲ್ಲಿ ಬಿಡುಗಡೆಗೊಳಿಸಲಾಗಿತ್ತು.