ಮಡಿಕೇರಿ, ಸೆ. ೧೦: ವೀರಾಜಪೇಟೆ ವಿಭಾಗದ ವೀರಾಜಪೇಟೆ ಅರಣ್ಯ ವಲಯದ ವ್ಯಾಪ್ತಿಗೆ ಬರುವ ಗ್ರಾಮಗಳಾದ ದೇವಣಗೇರಿ, ಮೈತಾಡಿ, ಚಾಮಿಯಾಲ, ಚಂಬೆಬೆಳ್ಳೂರು ಗ್ರಾಮಗಳಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳನ್ನು ತಾ. ೧೨ ಮತ್ತು ೧೩ ರಂದು ಕಾಡಿಗೆ ಓಡಿಸುವ ಕಾರ್ಯಾಚರಣೆಯನ್ನು ಕೈಗೊಳ್ಳಲಾಗುತ್ತದೆ. ತೋಟದ ಕಾರ್ಮಿಕರು ತಮ್ಮ ಕೆಲಸ ಕಾರ್ಯಗಳನ್ನು ನಿಲ್ಲಿಸಬೇಕು. ಗ್ರಾಮಸ್ಥರು, ಶಾಲಾ ಮಕ್ಕಳು ಎಚ್ಚರಿಕೆಯಿಂದ ಇದ್ದು, ಕಾಡಾನೆ ಕಾರ್ಯಾಚರಣೆಗೆ ಇಲಾಖೆಯೊಂದಿಗೆ ಸಹಕರಿಸಬೇಕು. ಕಾರ್ಯಾಚರಣೆ ಸಮಯದಲ್ಲಿ ಸಾರ್ವಜನಿಕರು ಪಟಾಕಿಗಳನ್ನು ಸಿಡಿಸಬಾರದೆಂದು ಮಾಜಿ ಜಿ.ಪಂ. ಸದಸ್ಯ ಶಶಿ ಸುಬ್ರಮಣಿ ಮತ್ತು ವೀರಾಜಪೇಟೆ ವಲಯ ಅರಣ್ಯಾಧಿಕಾರಿ ಕೆ.ಎಂ. ದೇವಯ್ಯ ಪ್ರಕಟಣೆಯಲ್ಲಿ ಕೋರಿದ್ದಾರೆ.