ಸಿದ್ದಾಪುರ, ಸೆ. ೧೦: ಸಿದ್ದಾಪುರದ ಗುಹ್ಯ ಅಗಸ್ತೆö್ಯÃಶ್ವರ ಸೇವಾ ಸಹಕಾರ ಸಂಘದ ವತಿಯಿಂದ ಸಿದ್ದಾಪುರ ಕರಡಿಗೋಡು ರಸ್ತೆಯಲ್ಲಿರುವ ಸಂಘದ ಸ್ವಂತ ಜಾಗದಲ್ಲಿ ನೂತನವಾಗಿ ನಿರ್ಮಾಣ ಮಾಡುವ ವಾಣಿಜ್ಯ ಕಟ್ಟಡಕ್ಕೆ ಗುಹ್ಯ ಅಗಸ್ತೆö್ಯÃಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾದ ಎಂ.ಬಿ ಜೋಯ್ ರವರು ಭೂಮಿಪೂಜೆ ನೆರವೇರಿಸಿದರು. ರೂ. ೯೫ ಲಕ್ಷ ವೆಚ್ಚದ ವಾಣಿಜ್ಯ ಕಟ್ಟಡ ನಿರ್ಮಾಣವಾಗಲಿದೆಂದು ಆಡಳಿತ ಮಂಡಳಿಯವರು ತಿಳಿಸಿದರು. ಕಾರ್ಯಕ್ರಮದಲ್ಲಿ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಬಿ ಪ್ರಸನ್ನ ನಿರ್ದೇಶಕರಾದ ಕೆ.ಕೆ ಚಂದ್ರಕುಮಾರ್ ಸೇರಿದಂತೆ ನಿರ್ದೇಶಕರುಗಳು ಹಾಜರಿದ್ದರು.