ಕುಶಾಲನಗರ, ಸೆ. ೧೧: ಕುಶಾಲನಗರ ಸಮೀಪದ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರುತಿ ಬಡಾವಣೆಯಲ್ಲಿ ನಡೆದ ಯುವತಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕುಶಾಲನಗರ ಪಟ್ಟಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಚೆಲುವರಾಜು ಅವರ ಪುತ್ರ ಕುಮಾರ್ ಬಂಧಿತ ಆರೋಪಿ. ಆರೋಪಿಯ ಪ್ರಚೋದನೆಯಿಂದ ಯುವತಿ ಲ್ಯಾನ್ಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೋಷಕರ ದೂರಿನ ಮೇರೆಗೆ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕುಶಾಲನಗರ ಡಿವೈಎಸ್‌ಪಿ ಗಂಗಾಧರಪ್ಪ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ವೃತ್ತ ನಿರೀಕ್ಷಕ ಮಹೇಶ್ ನೇತೃತ್ವದಲ್ಲಿ ಕುಶಾಲನಗರ ಪಟ್ಟಣ ಪೊಲೀಸ್ ಠಾಣೆ ಅಧಿಕಾರಿ ಅಪ್ಪಾಜಿ ಮತ್ತು ಸಿಬ್ಬಂದಿಗಳು ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದರು.

ಆರೋಪಿ ತಮಿಳುನಾಡಿನ ಈರೋಡ್‌ನಲ್ಲಿ ಪತ್ತೆಯಾಗಿದ್ದು, ಆತನನ್ನು ಕುಶಾಲನಗರ ಪೊಲೀಸರು ಬಂಧಿಸಿ ನ್ಯಾಯಾಂಗದ ವಶಕ್ಕೆ ನೀಡಿದ್ದಾರೆ.