ಕಣಿವೆ, ಸೆ. ೧೧: ಅವಿಭಜಿತ ಕುಶಾಲನಗರ ಹಾಗೂ ಸೋಮವಾರಪೇಟೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಕ್ರಿಕೆಟ್ ಹಾಗೂ ಚದುರಂಗ ಕ್ರೀಡಾಕೂಟ ಕುಶಾಲನಗರದ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನೆರವೇರಿತು.

ಕ್ರೀಡಾಕೂಟವನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಟನೆಯ ರಾಜ್ಯ ಸಮಿತಿಯ ಪದಾಧಿಕಾರಿ ಹೆಚ್.ಎಸ್. ಚೇತನ್ ಉದ್ಘಾಟಿಸಿ ದರು. ಬಳಿಕ ಮಾತನಾಡಿದ ಅವರು, ಶಿಕ್ಷಕರು ಕರ್ತವ್ಯದ ಒತ್ತಡಗಳಿಂದ ಹೊರಬರಲು ಕ್ರೀಡೆಗಳು ಹೆಚ್ಚು ಉಪಕಾರಿ ಎಂದರು.

ಶಿಕ್ಷಕರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್, ಪ್ರೌಢಶಾಲಾ ಶಿಕ್ಷಕರ ಸಂಘಟನೆಯ ಜಿಲ್ಲಾಧ್ಯಕ್ಷ ಸಿ.ಟಿ. ಸೋಮಶೇಖರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಹೆಚ್.ಎನ್. ಮಂಜುನಾಥ್, ಸೋಮವಾರ ಪೇಟೆ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜು, ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ, ಲೋಕೋಪ ಯೋಗಿ ಇಲಾಖೆ ಇಂಜಿನಿಯರ್ ಶೈಜನ್ ಪೀಟರ್, ಕುಶಾಲನಗರ ಬ್ಯಾಂಕ್ ಆಫ್ ಬರೋಡ ಮೇನೇಜರ್ ಸತೀಶ್ ಕುಮಾರ್, ಶಿಕ್ಷಕರ ಸಂಘದ ಪದಾಧಿಕಾರಿ ಗಳಾದ ಜಯಕುಮಾರ್, ಟಿ.ವಿ. ಶೈಲಾ, ಉಮಾದೇವಿ, ಎ.ಸಿ. ಮಂಜುನಾಥ್ ಮತ್ತಿತರರು ಇದ್ದರು.