ಮಡಿಕೇರಿ, ಸೆ.೧೬: ‘ಜಿಲ್ಲಾಧಿಕಾರಿ ಅವರ ನಡೆ ಹಳ್ಳಿಯ ಕಡೆ’ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ತಾ ೧೭ ರಂದು (ಇಂದು) ಬೆಳಗ್ಗೆ ೧೦ ಗಂಟೆಗೆ ವೀರಾಜಪೇಟೆ ತಾಲೂಕಿನ ಅಮ್ಮತ್ತಿ ಹೋಬಳಿಯ ಕಳತ್ಮಾಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ತಿಳಿಸಿದ್ದಾರೆ.