ಮಡಿಕೇರಿ, ಸೆ. ೨೨: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆಯಡಿಯಲ್ಲಿ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ೨೧ ರಿಂದ ೩೫ ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರುವ, ಕನ್ನಡ ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯ ಹೊಂದಿರುವ ಸಮುದಾಯದಲ್ಲಿ ಯುವ ಜನರಿಗೆ ತರಬೇತಿಯಂತಹ ಕಾರ್ಯಕ್ರಮ ನಡೆಸಲು ಆಸಕ್ತಿ ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ, ಅರ್ಹತಾ ಮಾನದಂಡ ಹೊಂದಿರುವ ಅಭ್ಯರ್ಥಿಗಳು, ತಮ್ಮ ಸ್ವ ವಿವರಗಳು ಮತ್ತು ಅಂಕಪಟ್ಟಿಗಳೊAದಿಗೆ ತಾ. ೨೩ ರಂದು (ಇಂದು) ನೇರ ಸಂದರ್ಶನಕ್ಕೆ ಯುವ ಸ್ಪಂದನ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ, ಮಡಿಕೇರಿ ಇಲ್ಲಿಗೆ ಸಲ್ಲಿಸಲು ಕೋರಿದೆ. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ ಕೊಡಗು ಇವರನ್ನು ಖುದ್ದಾಗಿ ಅಥವಾ ದೂ. ೦೮೨೭೨-೨೨೫೯೮೫, ನಾಗರತ್ನ ಕ್ಷೇತ್ರ ಸಂಪರ್ಕ ಅಧಿಕಾರಿ, ಯುವ ಸ್ಪಂದನ ಕಾರ್ಯಕ್ರಮ ಮೊ. ೮೦೮೮೪೮೮೬೮೮ ಹಾಗೂ ಜಯಶ್ರೀ, ಯುವ ಸಮಲೋಚಕರು ೯೫೩೫೨೮೯೬೮೯ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್. ಗುರುಸ್ವಾಮಿ ತಿಳಿಸಿದ್ದಾರೆ.