ಕೂಡಿಗೆ, ಸೆ. ೨೨: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ತಾ ೨೬ ರಿಂದ ಅ.೪ ರವರೆಗೆ ನವರಾತ್ರಿ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.

ಇದರ ಅಂಗವಾಗಿ ಪ್ರತಿ ದಿನ ಸಂಜೆ ೭ ಗಂಟೆಗೆ ದೇವಿಯ ಸನ್ನಿಧಿಯಲ್ಲಿ ಭಕ್ತ ವೃಂದದ ಮೂಲಕ ಶ್ರೀ ಲಲಿತಾ ಸಹಸ್ರನಾಮ ಪಾರಾಯಣದೊಂದಿಗೆ ಕುಂಕುಮಾರ್ಚನೆ ನಡೆಯಲಿದೆ.

ತಾ. ೩೦ ರಂದು ದೇವಿಯ ಸನ್ನಿಧಿಯಲ್ಲಿ ಗಣಪತಿ ಹೋಮ, ಶ್ರೀ ಮೃತ್ಯುಂಜಯ ಹೋಮ, ನಂತರ ಶ್ರೀ ಚಂಡಿಕಾ ಹೋಮ ನಡೆಯಲಿದೆ. ಕ್ಷೇತ್ರಕ್ಕೆ ಆಗಮಿಸುವ ಸರ್ವರಿಗೂ ಮಧ್ಯಾಹ್ನ ಮತ್ತು ರಾತ್ರಿ ಅನ್ನ ಸಂತರ್ಪಣೆ ನಡೆಯಲಿದೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಟ.ಎಂ. ಚಾಮಿ ತಿಳಿಸಿದ್ದಾರೆ.