ಕೂಡಿಗೆ, ಸೆ. ೨೯: ಚಾಕು ಇರಿದು ಪತ್ನಿಯ ಹತ್ಯೆಗೆ ಯತ್ನಿಸಿದ ಘಟನೆ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂದರನಗರ ಗ್ರಾಮದಲ್ಲಿ ಬುಧವಾರ ನಡೆದಿದೆ. ಕೌಟುಂಬಿಕ ಕಲಹ ತಾರಕಕ್ಕೇರಿ ರಾಜೇಶ್ ಎಂಬಾತ ತನ್ನ ಪತ್ನಿ ಜ್ಯೋತಿ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ಪತ್ನಿಗೆ ೯ ಕಡೆ ಇರಿದ ಗಾಯಗಳಾಗಿದ್ದು ಮಡಿಕೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ರಾಜೇಶನನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಬಂಧಿಸಿ ಕೊಲೆ ಯತ್ನ ಪ್ರಕರಣ ದಾಖಲಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.