ಕೂಡಿಗೆ, ಅ. ೩: ಕೂಡಿಗೆ ದಂಡಿನಮ್ಮ ತಾಯಿ ನವರಾತ್ರಿ ಪೂಜಾ ಸೇವಾ ಸಮಿತಿಯ ವತಿಯಿಂದ ನವರಾತ್ರಿ ಪೂಜಾ ಕಾರ್ಯಕ್ರಮವು ದೇವಿಗೆ ಹೋಮ ಹವನ, ಅಭಿಷೇಕ್ ಸೇರಿದಂತೆ ವಿಶೇಷ ಪೂಜಾ ಕಾರ್ಯಕ್ರಮಗಳೊಂದಿಗೆ ದಂಡಿನಮ್ಮ ದೇವಾಲಯದ ಆವರಣದಲ್ಲಿ ನಡೆದವು.

ಇದರ ಅಂಗವಾಗಿ ಗಣಪತಿ ಹೋಮ ಚಂಡಿಕಾ ಹೋಮ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮ ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಜರುಗಿತು. ದೇವಾಲಯ ಮತ್ತು ಗ್ರಾಮವು ತಳಿರು ತೋರಣಗಳಿಂದ ಸಿಂಗಾರಗೊAಡಿತ್ತು.

ಪೂಜಾ ಕಾರ್ಯಕ್ರಮದಲ್ಲಿ ಕೂಡಿಗೆ, ಭುವನಗಿರಿ ಸೀಗೆಹೊಸೂರು ಮದಲಾಪುರ ಮಲ್ಲೇನಹಳ್ಳ ಹೆಗ್ಗಡಹಳ್ಳಿ ಸೇರಿದಂತೆ ನೂರಾರು ಭಕ್ತಾದಿಗಳು ಭಾಗವಹಿಸಿದರು ಅಗಮಿಸಿದ ಭಕ್ತರಿಗೆ ಅನ್ನ ಸಂತರ್ಪಣೆಯ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ದೇವಾಲಯ ಸಮಿತಿಯ ಅಧ್ಯಕ್ಷ ಕೆ.ಟಿ. ಗಿರೀಶ್, ಕಾರ್ಯದರ್ಶಿ ಗುರುಪಾದಸ್ವಾಮಿ, ದೇವಾಲಯ ಸಮಿತಿಯ. ಮಾಜಿ ಅಧ್ಯಕರುಗಳು, ಸೇರಿದಂತೆ ಸಮಿತಿಯ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.