ಮಡಿಕೇರಿ, ನ. ೨೩: ಮಡಿಕೇರಿಯ ಶ್ರೀ ಮುತ್ತಪ್ಪ ದೇವಾಲಯ ಆವರಣದಲ್ಲಿನ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ತಾ. ೨೯ ರಂದು ಶ್ರೀ ಸುಬ್ರಹ್ಮಣ್ಯ ಸ್ವಾಮಿ ಷಷ್ಠಿ ಪೂಜೆ ನಡೆಯಲಿದೆ. ಸುಬ್ರಹ್ಮಣ್ಯ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಅಪ್ಪಂ ಸೇವೆ, ಪಂಚಕಜ್ಜಾಯ ಸೇವೆ, ಹಣ್ಣುಕಾಯಿ ಪೂಜೆ, ಪುಷ್ಪಾರ್ಚನೆ, ಮಂಗಳಾರತಿ ಇತ್ಯಾದಿ ಸೇವೆಗಳು ನಡೆಯಲಿವೆ. ಬೆಳಿಗ್ಗೆ ೯ ಗಂಟೆಗೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ ನಡೆಯಲಿದೆ. ಮಧ್ಯಾಹ್ನ ೧೨ ಗಂಟೆಗೆ ಶ್ರೀ ಸುಬ್ರಹ್ಮಣ್ಯ ದೇವರ ಭೂತ ಬಲಿ, ೧೨.೩೦ಕ್ಕೆ ಮಹಾಮಂಗಳಾರತಿ ನಂತರ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ೭ ಗಂಟೆಗೆ ಭಜನಾ ಕಾರ್ಯಕ್ರಮ, ಮಹಾಪೂಜೆ ನಂತರ ಪ್ರಸಾದ ವಿತರಣೆ ನಡೆಯಲಿದೆ.