ಸುAಟಿಕೊಪ್ಪ, ನ. ೨೮: ಮೇಯಲು ಕಟ್ಟಿಹಾಕಿದ್ದ ಹಸುವಿನ ಮೇಲೆ ಹೇಯ ಕೃತ್ಯ ಎಸಗುತ್ತಿದ್ದ ವ್ಯಕ್ತಿಯೊಬ್ಬನನ್ನು ಸ್ಥಳೀಯ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ವರದಿಯಾಗಿದೆ.
ತಾ.೨೭ರಂದು ಈ ಕೃತ್ಯ ಬೆಳಕಿಗೆ ಬಂದಿದ್ದು, ಪೊಲೀಸರು ಆರೋಪಿಯ ವಿರುದ್ಧ ಮೊಕದ್ದಮೆ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.
ಪೊಲೀಸ್ ಮಾಹಿತಿಯ ಪ್ರಕಾರ ಸುಂಟಿಕೊಪ್ಪ ಸಮೀಪದ ಅಂದಗೋವೆ ಗ್ರಾಮದ ಸಿ.ಎ. ದೇವಯ್ಯ ಅವರಿಗೆ ಸೇರಿದ ಹಸುವನ್ನು ಮೇಯಲು ಬಿಟ್ಟಿದ್ದು, ತಾವು ಸಂತೆಗೆ ಹೋಗಿ ವಾಪಾಸ್ಸು ಬರುವ ಸಂದರ್ಭ ತಮ್ಮ ಗದ್ದೆಯ ದಾರಿಯಲ್ಲಿ ಮೋಟಾರ್ ಬೈಕ್ ನಿಂತಿದ್ದನ್ನು ಗಮನಿಸಿದ್ದಾರೆ. ದೇವಯ್ಯ ಮನೆಗೆ ಹೋಗಿ ಮೇಯಲು ಬಿಟ್ಟಿದ್ದ ಹಸುವನ್ನು ವಾಪಾಸು ಕೊಟ್ಟಿಗೆಗೆ ತರಲು ಹೋದ ಸಂದರ್ಭ ಅಪರಿಚಿತ ವ್ಯಕ್ತಿಯೊಬ್ಬ ಹಸುವಿನ ಮೇಲೆ ಪೈಶಾಚಿಕ ಕೃತ್ಯ ಎಸಗುತ್ತಿರುವುದನ್ನು ನೋಡಿ ಆತನನ್ನು ಹಿಡಿದು ವಿಚಾರಿಸಿದಾಗ ಸುಂಟಿಕೊಪ್ಪ ಪಂಪ್ ಹೌಸ್ ನಿವಾಸಿ ಅಬೂಬಕ್ಕರ್ ಸಿದ್ಧಿಕ್ ಎಂದು ತಿಳಿದು ಬಂದಿದೆ. ಪೊಲೀಸರಿಗೆ ದೂರು ನೀಡಿ ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದ್ದು, ಭಾರತೀಯ ದಂಡ ಸಂಹಿತೆ ಕಲಂ ೩೭೭ ಪ್ರಕಾರ ಮೊಕದ್ದಮೆ ದಾಖಲಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಸಂದರ್ಭ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.