ಕುಶಾಲನಗರ, ನ. ೨೯: ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಗುಂಡೂರಾವ್ ಬಡಾವಣೆಯಲ್ಲಿ ಒಳ ಚರಂಡಿ ಕಾಮಗಾರಿ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೂಮಿ ಪೂಜೆ ನೆರವೇರಿಸಿದರು.
ಐ.ಡಿ.ಎಸ್.ಎಂ.ಟಿ. ಅನುದಾನದಲ್ಲಿ ಅಂದಾಜು ೩.೨ ಕಿ.ಮೀ ಉದ್ದದ ಒಳ ಚರಂಡಿ ಕಾಮಗಾರಿಗೆ ೧.೨೨ ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ. ಅಂದಾಜು ೪೨.೫೦ ಲಕ್ಷ ರೂ.ಗಳ ವೆಚ್ಚದಲ್ಲಿ ೪೦೦ ಮೀ. ಉದ್ದದ ರಸ್ತೆ ನಿರ್ಮಿಸಲಾಗುತ್ತಿದೆ ಎಂದು ಶಾಸಕ ರಂಜನ್ ತಿಳಿಸಿದರು.
ಇದೇ ಸಂದರ್ಭ ಕುಶಾಲನಗರ ಪಟ್ಟಣ ಪಂಚಾಯಿತಿ ವತಿಯಿಂದ ಘನ ತ್ಯಾಜ್ಯ ವಸ್ತು ವಿಲೇವಾರಿಗಾಗಿ ಬ್ಯಾಕ್ಹೋ ಲೋಡರ್ ಮತ್ತು ಇದೇ ಸಂದರ್ಭ ಕುಶಾಲನಗರ ಪಟ್ಟಣ ಪಂಚಾಯಿತಿ ವತಿಯಿಂದ ಘನ ತ್ಯಾಜ್ಯ ವಸ್ತು ವಿಲೇವಾರಿಗಾಗಿ ಬ್ಯಾಕ್ಹೋ ಲೋಡರ್ ಮತ್ತು ಇದೇ ಸಂದರ್ಭ ಕುಶಾಲನಗರ ಪಟ್ಟಣ ಪಂಚಾಯಿತಿ ವತಿಯಿಂದ ಘನ ತ್ಯಾಜ್ಯ ವಸ್ತು ವಿಲೇವಾರಿಗಾಗಿ ಬ್ಯಾಕ್ಹೋ ಲೋಡರ್ ಮತ್ತು ಎಕ್ಸ್ಕವೇಟರ್ ಯಂತ್ರ ಖರೀದಿಸಲಾ ಗಿದ್ದು, ಶಾಸಕರು ಚಾಲನೆ ನೀಡಿದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್, ಉಪಾಧ್ಯಕ್ಷೆ ಸುರಯ್ಯಭಾನು, ಕುಶಾಲನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎA. ಚರಣ್, ಸದಸ್ಯರು ಮತ್ತು ಅಧಿಕಾರಿಗಳು ಇದ್ದರು.