ಮಡಿಕೇರಿ, ನ. ೩೦: ಜಿಲ್ಲೆಯ ಪವಿತ್ರ ಕ್ಷೇತ್ರಗಳಾದ ಭಗಂಡೇಶ್ವರ- ತಲಕಾವೇರಿ ದೇವಾಲಯ ಹಾಗೂ ಶ್ರೀ ಓಂಕಾರೇಶ್ವರ ದೇವಾಲಯಗಳಿಗೆ ಪ್ರಬಾರ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ದೇವಾಲಯಗಳ ಸಮಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಬಿ.ಎಂ. ಕೃಷ್ಣಪ್ಪ ಅವರ ವರ್ಗಾವಣೆ ಹಿನ್ನೆಲೆಯಲ್ಲಿ ಭಾಗಮಂಡಲ ಹೋಬಳಿ ಉಪ ತಹಶೀಲ್ದಾರ್ ಎಂ.ಎಸ್. ದೊರೆ ಅವರನ್ನು ಭಗಂಡೇಶ್ವರ-ತಲಕಾವೇರಿ ದೇವಾಲಯದ ಪ್ರಬಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮಡಿಕೇರಿ ತಾಲೂಕು ಶಿರಸ್ತೆದಾರರಾಗಿರುವ ಪಿ.ಎಲ್. ದೇವರಾಜು ಅವರನ್ನು ಓಂಕಾರೇಶ್ವರ ದೇವಾಲಯ ಸಮಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಿ ಅಪರ ಜಿಲ್ಲಾಧಿಕಾರಿ ನಂಜುAಡೇಗೌಡ ಆದೇಶ ಹೊರಡಿಸಿದ್ದಾರೆ.