ಕುಶಾಲನಗರ, ಡಿ. ೧೩: ವಿದ್ಯುತ್ ತಂತಿ ನಿರ್ವಹಣೆ ನೆಪದಲ್ಲಿ ಭಾರೀ ಗಾತ್ರದ ಮರವೊಂದನ್ನು ಅಕ್ರಮವಾಗಿ ಕಡಿದು ಬೀಳಿಸಿದ ಪ್ರಕರಣಕ್ಕೆ ಸಂಬAಧಿಸಿದAತೆ ಕೆಪಿಟಿಸಿಎಲ್ ಅಧಿಕಾರಿ ಮೇಲೆ ಕುಶಾಲನಗರ ಅರಣ್ಯಾಧಿಕಾರಿಗಳು ಮೊಕದ್ದಮ್ಮೆ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ.

ವಿದ್ಯುತ್ ತಂತಿಗಳಿಗೆ ಮರಗಳ ಕೊಂಬೆಗಳು ತಗಲುತ್ತಿರುವ ನೆಪದಲ್ಲಿ ಕೆಪಿಟಿಸಿಎಲ್ ಸಿಬ್ಬಂದಿಗಳು ಕುಶಾಲನಗರ ಅರಣ್ಯ ತಪಾಸಣಾ ಗೇಟ್ ಬಳಿ ಕಾವೇರಿ ನದಿ ತಟದಲ್ಲಿ ಬೆಳೆದು ನಿಂತಿದ್ದ ಬೃಹತ್ ಮರವನ್ನು ಬುಡ ಸಮೇತ ಕಡಿದು ಹಾನಿಗೊಳಿಸಿರುವ ಬಗ್ಗೆ ಸ್ಥಳೀಯ ಕಾವೇರಿ ಪರಿಸರ ರಕ್ಷಣಾ ಬಳಗದ ಪ್ರಮುಖರು ದೂರು ನೀಡಿದ ಮೇರೆಗೆ ಕುಶಾಲನಗರ ವಲಯ ಅರಣ್ಯಾಧಿಕಾರಿ ಕೆ.ವಿ. ಶಿವರಾಮ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ ಕುಶಾಲನಗರ ಕೆಪಿಟಿಸಿಎಲ್ ಅಧಿಕಾರಿ ಮೇಲೆ ಮೊಕದ್ದಮ್ಮೆ ದಾಖಲಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ. ಅರಣ್ಯ ತಪಾಸಣಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಗಳ ಮೇಲೆಯೂ ಕೂಡ ಕ್ರಮಕೈಗೊಳ್ಳಲಾಗುವುದು ಎಂದು ಅರಣ್ಯ ಅಧಿಕಾರಿ ಶಿವರಾಮ್ ತಿಳಿಸಿದ್ದಾರೆ.