ಮಡಿಕೇರಿ, ಜ. ೪: ಕೊಡವ ಜನಾಂಗದ ಬಹುಕಾಲದ ಬೇಡಿಕೆ ಯಾಗಿರುವ ಭೂ - ರಾಜಕೀಯ ಸ್ವಾಯತ್ತತೆ, ಕೊಡವ ಜನಾಂಗಕ್ಕೆ ಬುಡಕಟ್ಟು ಸ್ಥಾನಮಾನ ನೀಡುವುದು ಸೇರಿದಂತೆ ಇನ್ನಿತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ತಾ.೬ ರಂದು (ನಾಳೆ) ಶಾಂತಿಯುತ ಸತ್ಯಾಗ್ರಹ ನಡೆಯಲಿದೆ ಎಂದು ಸಂಘಟನೆಯ ಅಧ್ಯಕ್ಷ ನಂದಿನೆರವAಡ ಯು. ನಾಚಪ್ಪ ತಿಳಿಸಿದ್ದಾರೆ. ಸತ್ಯಾಗ್ರಹದ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಸಂಘಟನೆಯ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಸಲ್ಲಿಸಲಾಗುವುದೆಂದು ಅವರು ತಿಳಿಸಿದ್ದಾರೆ.