ಸುಂಟಿಕೊಪ್ಪ, ಜ. ೨೫: ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೪ನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಗುಡ್ಡೆಹೊಸೂರು ವೃತ್ತದಲ್ಲಿ ಸ್ವಾಮೀಜಿಯವರ ಭಾವಚಿತ್ರ ಇರಿಸಿ ವಿಶೇಷ ಪೂಜೆ ಅನ್ನಸಂತರ್ಪಣೆಯನ್ನು ಏರ್ಪಡಿಸ ಲಾಗಿತ್ತು. ಗುಡ್ಡೆಹೊಸೂರಿನ ವೃತ್ತದಲ್ಲಿ ತಾಲೂಕು ವೀರಶೈವ ಸಂಘದ ವತಿಯಿಂದ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಶಿವಪ್ಪ, ಕಾರ್ಯದರ್ಶಿ ಸಾಂಭಶಿವಮೂರ್ತಿ, ಬೊಳ್ಳೂರು ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಬಿ.ಸಿ. ಮಲ್ಲಿಕಾರ್ಜುನ ನಿರ್ದೇಶಕ ಡಿ.ಎಂ. ಪ್ರದೀಪ್, ಪ್ರಸನ್ನ, ಪಾಪಣ್ಣ, ಸುರೇಶ್, ಸಮಾಜದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.