ಮಡಿಕೇರಿ, ಜ. ೨೪: ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಜಿಲ್ಲೆಯ ನಾಲ್ವರು ಮಾಜಿ ಸೈನಿಕರಿಗೆ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಪ್ರಶಸ್ತಿ ಪ್ರದಾನ ಮಾಡÀಲಾಯಿತು.

ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ನಡೆದ “ಆರ್ಮಿ ಡೇ” ಕಾರ್ಯಕ್ರಮದಲ್ಲಿ ಮಾಜಿ ಸೈನಿಕರಾಗಿ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ, ಕ್ರೀಡೆಯಲ್ಲಿ ಸಾಧನೆ ಮಾಡಿದ ಹೊಸೊಕ್ಲು ಚಿಣ್ಣಪ್ಪ, ತಂಬAಡ ನಾಣಯ್ಯ ಹಾಗೂ ಪ್ರಗತಿಪರ ಕೃಷಿಕ ಗಣೇಶ್ ತಿಮ್ಮಯ್ಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.